Featured

ಜಲ ಸಂರಕ್ಷಣೆಗಾಗಿ ಜಲಶಕ್ತಿ ಅಭಿಯಾನ -Vishwanews24

ಜಲ ಸಂರಕ್ಷಣೆಗಾಗಿ ಜಲಶಕ್ತಿ ಅಭಿಯಾನ -Vishwanews24

ದೇಶದ ಗ್ರಾಮೀಣ ಪ್ರದೇಶಗಳು ಎದುರಿಸುತ್ತಿರುವ ಜಲಮೂಲಗಳ ಕೊರತೆ , ಅಂರ್ತಜಲ ಸಮಸ್ಯೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಹಾಗೂ ಕುಡಿಯುವ ನೀರಿನ ಕೊರೆತೆಯನ್ನು ನಿವಾರಿಸಿ , ಈ ಮೂಲಕ ಕೃಷಿ ಚಟುವಟಿಕೆಗಳನ್ನು ಅಭಿವೃಧ್ದಿಗೊಳಿಸಿ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಜಲಶಕ್ತಿ ಅಭಿಯಾನ ಎಂಬ ಬಹುದೊಡ್ಡ ಯೋಜನೆಯನ್ನು ರಾಷ್ಟಾçದ್ಯಂತ ಅನುಷ್ಠಾನಗೊಳಿಸಿದೆ.
ಕೇಂದ್ರ ಸರ್ಕಾರವು ಮಾರ್ಚ್ ೨೨, ೨೦೨೧ ರಿಂದ ನವೆಂಬರ್ ೩೦, ೨೦೨೧ ರ ವರೆಗೆ ಜಲಶಕ್ತಿ ಅಭಿಯಾನ-Catch the Rain ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿದ್ದು, ಪ್ರಧಾನ ಮಂತ್ರಿಗಳು ಈ ಅಭಿಯಾನಕ್ಕೆ ಈಗಾಗಲೇ ಚಾಲನೆಯನ್ನು ನೀಡಿ, ಮುಂಗಾರು ಪೂರ್ವದ ೧೦೦ ದಿನ ಅವಧಿಯಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಮಳೆ ನೀರು ಸಂರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಮಳೆ ನೀರು ಸಂರಕ್ಷಣೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಾಕಷ್ಟು ಅವಕಾಶಗಳಿದ್ದು, ಅದನ್ನು ಬಳಸಿಕೊಂಡು ಅಂತರ್ಜಲ ಸಂರಕ್ಷಣೆಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಬಹುದಾಗಿದೆ. ಗ್ರಾಮದ ವ್ಯಾಪ್ತಿಯಲ್ಲಿರುವ ಕೆರೆ, ಕಲ್ಯಾಣಿಗಳ ಸಮಗ್ರ ಅಭಿವೃದ್ಧಿ, ನೀರು ಹರಿದು ಹೋಗುವ ನಾಲಾ/ ಕಾಲುವೆಗಳ ಪುನಶ್ಚೇತನ, ಹೊಸಕೆರೆ, ಗೋಕಟ್ಟೆಗಳ ನಿರ್ಮಾಣ, ಕಿಂಡಿಆಣೆಕಟ್ಟು, ಬೋರ್‌ವೆಲ್‌ರಿಚಾರ್ಜ್, ಕಟ್ಟಡಗಳಿಗೆ ಮಳೆ ನೀರುಕೊಯ್ಲು, ಅರಣ್ಯೀಕರಣಕಾಮಗಾರಿಇತ್ಯಾದಿ ಸಮುದಾಯ ಕಾರ್ಯಕ್ರಮಗಳನ್ನು ನೀರಾವರಿ ಬಾವಿ ನಿರ್ಮಾಣ, ಸೋಕ್ ಪಿಟ್‌ಗಳ ನಿರ್ಮಾಣ, ಬದುಗಳ ನಿರ್ಮಾಣ, ಕೃಷಿಹೊಂಡ ಮೊದಲಾದ ವೈಯಕ್ತಿಕ ಕಾರ್ಯಕ್ರಮಗಳನ್ನು MGNREGA ಯಡಿ ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ : ಸಿಎಂ ಖಡಕ್ ಎಚ್ಚರಿಕೆ -Vishwanews24

MGNREGA ಕಾರ್ಯಕ್ರಮದಡಿ ಕೂಲಿದರ ವನ್ನುರೂ.೨೭೫ ರಿಂದರೂ.೨೮೯ ಕ್ಕೆ ಹೆಚ್ಚಿಸಲಾಗಿದ್ದು, ವರ್ಷಕ್ಕೆ ಪ್ರತೀಕುಟುಂಬಕ್ಕೆ ೧೦೦ ದಿನಗಳು ಉದ್ಯೋಗಅಭಿಯಾನಜಾರಿಯಲ್ಲಿದ್ದು, ಉದ್ಯೋಗಚೀಟಿ ಹೊಂದದ ಕುಟುಂಬಗಳು ಗ್ರಾಮ ಪಂಚಾಯತ್ ಸಂಪರ್ಕಿಸಿ ಉದ್ಯೋ ಗಚೀಟಿ ಪಡೆದುಗ್ರಾಮ ಪಂಚಾಯತ್‌ನಿ0ದ ಕೂಲಿ ಉದ್ಯೋಗ ಪಡೆಯಬಹುದಾಗಿದೆ.

ಉಡುಪಿ ಜಿಲ್ಲೆಯಲ್ಲಿMGNREGA ಕಾರ್ಯಕ್ರಮಕ್ಕೆ ಸಂಬ0ಧಿಸಿದ0ತೆ ಉತ್ತಮ ಸ್ಪಂದನೆದೊರೆತಿದ್ದು, ೨೦೨೦-೨೧ ನೇ ಸಾಲಿನಲ್ಲಿರೂ.೬.೬೮ ಲಕ್ಷ ಮಾನವದಿನಗಳ ಸೃಜನೆ ಮಾಡಲಾಗಿದೆ.ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಕೈಗೆತ್ತಿಕೊಂಡುಒಟ್ಟು ೭,೬೮೭ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ.

ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನದ ಅಂಗವಾಗಿ ಪ್ರತೀಗ್ರಾಮಕ್ಕೆ ಕನಿಷ್ಟ ೧ ಕೆರೆಯನ್ನು ಗುರುತಿಸಿ ಅದರ ಸಮಗ್ರಅಭಿವೃದ್ಧಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಒಟ್ಟು ೧೪೧ ಕೆರೆ, ೧೬೦ ಕಾಲುವೆ/ ತೋಡು ಹೂಳೆತ್ತುವುದು, ೨೦ ಕಿಂಡಿಆಣೆಕಟ್ಟು ನಿರ್ಮಾಣ, ೫೦ ಬೋರ್‌ವೆಲ್‌ರಿಚಾರ್ಜ್, ೧೪೫೫ ನೀರಾವರಿ ಬಾವಿ ನಿರ್ಮಾಣದ ಗುರಿ ಹೊಂದಲಾಗಿದೆ.ಪ್ರತೀ ಗ್ರಾಮ ಪಂಚಾಯತ್‌ನಲ್ಲಿ ಕನಿಷ್ಟ ಒಂದುಕಟ್ಟಡಕ್ಕೆ ಮಳೆನೀರು ಕೊಯ್ಲು ಕಾಮಗಾರಿ ನಿರ್ವಹಿಸುವಂತೆ, ಪ್ರತೀ ಗ್ರಾಮ ಪಂಚಾಯತ್‌ಗೆ ಕನಿಷ್ಟ ೫೦ ಸೋಕ್ ಪಿಟ್ ನಿರ್ಮಾಣದ ಸೂಚನೆ ನೀಡಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ತರಗತಿಗಳು ಇರುತ್ತವೆ, ಆನ್ ಲೈನ್ ಪರೀಕ್ಷೆ ಸಾಧ್ಯವಿಲ್ಲ : ಡಿಸಿಎಂ -Vishwanews24

ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಜಲಶಕ್ತಿಅಭಿಯಾನದಲ್ಲಿಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆ ಕಾರ್ಯಕ್ರಮ ಹೊರತುಪಡಿಸಿ ಸಹ ಅಂತರ್ಜಲ ಮರುಪೂರಣಗೊಳಿಸುವ ಮೇಲಿನ ಕಾರ್ಯಕ್ರಮದಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಬಹುದಾಗಿದ್ದು, ಕೆರೆ ಅಭಿವೃದ್ಧಿ, ಅರಣ್ಯೀಕರಣ ಮೊದಲಾದ ಸಮುದಾಯ ಕಾರ್ಯಕ್ರಮ, ಸ್ವಂತ ಮನೆಗಳಲ್ಲಿ ಮಳೆ ನೀರುಕೊಯ್ಲು, ನೀರು ಇಂಗಿಸುವಿಕೆ, ಸೋಕ್ ಪಿಟ್ ನಿರ್ಮಾಣ ಇತ್ಯಾದಿಗಳನ್ನು ಸ್ವಂತವಾಗಿ ಸಹ ಮಾಡಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಮಿಕ ಬಲದ ಲಭ್ಯತೆಯಿಂದಾಗಿ , ಜಲಶಕ್ತಿ ಅಭಿಯಾನ ಯೋಜನೆಯು ಮುಂಬರುವ ಮುಂಗಾರು ಮಳೆ ನೀರಿನ ಸಂರಕ್ಷಣೆ ಹಾಗೂ ಅಂತರ್ಜಲ ವೃಧ್ದಿಗಾಗಿ ಮಾಡಬೇಕಾದ ಸಿದ್ಧತೆಗಳ ಹಿನ್ನೆಲೆಯಲ್ಲಿ ಇಡೀ ದೇಶಕ್ಕೆ ಈ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ.
ಉಡುಪಿ ಜಿಲ್ಲೆಯಲ್ಲಿ ಜಲಶಕ್ತಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: ಉಡುಪಿ ಜಿಲ್ಲಾ ಪಂಚಾಯತ್ ನ ದೂ. ಸಂಖ್ಯೆ ೦೮೨೦-೨೫೭೪೯೪೫ ಅಥವಾ ತಮ್ಮ ಸಮೀಪದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಕೊರೊನಾಗೆ ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago