Featured

ಜಹಾಂಗಿರ್‌ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ – Vishwanews24

ಜಹಾಂಗಿರ್‌ಪುರಿ : ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ; ನವದೆಹಲಿಯ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಬುಧವಾರ ದೆಹಲಿ ಮಹಾನಗರ ಪಾಲಿಕೆ ಪೊಲೀಸರ ಸಹಾಯದೊಂದಿಗೆ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಂಡಿತ್ತು.

ಬುಧವಾರ ದೆಹಲಿ ಮಹಾನಗರ ಪಾಲಿಕೆಯ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯ ಆರಂಭಿಸಿತ್ತು. ಈ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದೆ ಮತ್ತು ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಅಕ್ರಮ ಕಟ್ಟಡಗಳ ತೆರವು ಕಾರ್ಯ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ತಡೆ ನೀಡಿದೆ. ಗುರುವಾರ ಮತ್ತೆ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.

ಬುಧವಾರ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಲು 9 ಜೆಸಿಬಿಗಳು ಆಗಮಿಸಿದ್ದವು. ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು 400 ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ಆದರೆ ಕಾರ್ಯಾಚರಣೆ ಆರಂಭವಾದ ತಕ್ಷಣ ಸುಪ್ರೀಂಕೋರ್ಟ್‌ ಕಾರ್ಯಾಚರಣೆಗೆ ತಡೆ ನೀಡಿದ್ದು ಗುರುವಾರ ಅರ್ಜಿಯ ವಿಚಾರಣೆ ನಡೆಸುವ ತನಕ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದೆ.

ದೆಹಲಿಯ ಪೊಲೀಸ್ ಆಯುಕ್ತ ದಿಪೇಂದ್ರ ಪಾಠಕ್ ಸೇರಿದಂತೆ ಹಲವು ಅಧಿಕಾರಿಗಳು ಬುಧವಾರ ಬೆಳಗ್ಗೆ ಸ್ಥಳ ಪರಿಶೀಲನೆ ನಡೆಸಿದ್ದರು. ಬಳಿಕ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು.

ಸುಪ್ರೀಂಕೋರ್ಟ್ ಆದೇಶ ಬರುತ್ತಿದ್ದಂತೆಯೇ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

10 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

10 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

10 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

11 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

11 hours ago