Featured

ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ : ಪ್ರಧಾನಿ ಮೋದಿ – Vishwanews24

ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ : ಪ್ರಧಾನಿ ಮೋದಿ – Vishwanews24

ನವದೆಹಲಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಭಾರತವು ತನ್ನ ಪಾಲುದಾರ ರಾಷ್ಟ್ರಗಳೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ಭಾಗವಹಿಸಿದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

“ಅಧ್ಯಕ್ಷ ಬೈಡೆನ್ ಅವರ ಆಹ್ವಾನದ ಮೇರೆಗೆ ಪ್ರಜಾಪ್ರಭುತ್ವದ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಸಂತೋಷವಾಗಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಬಹುಪಕ್ಷೀಯ ವೇದಿಕೆಗಳು ಸೇರಿದಂತೆ ಜಾಗತಿಕವಾಗಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ನಮ್ಮ ಪಾಲುದಾರರೊಂದಿಗೆ ಕೆಲಸ ಮಾಡಲು ಭಾರತ ಸಿದ್ಧವಾಗಿದೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ತಂತ್ರಜ್ಞಾನವು ಪ್ರಜಾಪ್ರಭುತ್ವವನ್ನು “ಸಕಾರಾತ್ಮಕವಾಗಿ ಅಥವಾ ಋಣಾತ್ಮಕವಾಗಿ” ಪ್ರಭಾವಿಸುವ ಸಾಮರ್ಥ್ಯವನ್ನು ಹೊಂದಿರುವುದರಿಂದ ತಂತ್ರಜ್ಞಾನ ಸಂಸ್ಥೆಗಳು ಪ್ರಜಾಪ್ರಭುತ್ವ ಸಮಾಜಗಳನ್ನು ಸಂರಕ್ಷಿಸಲು ಕೊಡುಗೆ ನೀಡಬೇಕು ಎಂದು ಗುರುವಾರ ನಡೆದ ವರ್ಚುವಲ್ ಶೃಂಗಸಭೆಯಲ್ಲಿ ಮೋದಿ ಹೇಳಿದ್ದರು.

ಬೈಡೆನ್ ಅವರು ಆಯೋಜಿಸಿದ್ದ ಪ್ರಜಾಪ್ರಭುತ್ವ ಶೃಂಗಸಭೆಯಲ್ಲಿ ನೂರಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

16 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

17 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

17 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

18 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

18 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

18 hours ago