Featured

ಜಾಗದ ವಿಚಾರಕ್ಕೆ ಜಗಳ : ರಿಯಲ್ ಎಸ್ಟೇಟ್ ಉದ್ಯಮಿಯಿಂದ  ಯುವಕನ ಬರ್ಬರ ಹತ್ಯೆ – vishwanews24

ಜಾಗದ ವಿಚಾರಕ್ಕೆ ಜಗಳ : ರಿಯಲ್ ಎಸ್ಟೇಟ್ ಉದ್ಯಮಿಯಿಂದ  ಯುವಕನ ಬರ್ಬರ ಹತ್ಯೆ

ತುಮಕೂರು: 3 ಕೋಟಿ ಮೌಲ್ಯದ ಜಾಗದ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ.

ಮಧುವನ್ (25) ಕೊಲೆಯಾದ ಯುವಕ. ನಿನ್ನ ತೋಟದಲ್ಲಿ ನಡೆದ ಗಲಾಟೆ ವೇಳೆ ಉದ್ಯಮಿ ಮಹೇಶ್‌ ಹಾಗೂ ಶಫಿವುಲ್ಲಾ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ. ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾನನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ನೆತ್ತರು ಹರಿದಿದ್ದೇಕೆ?
ಕೊಲೆಯಾದ ಮಧುವನ್‌ ಅವರ ತಂದೆ ನಾರಾಯಣಸ್ವಾಮಿ 2015ರಲ್ಲಿ ತುಮಕೂರಿನ ಅಮಾನಿಕೆರೆ ಬಳಿಯ 3 ಕೋಟಿ ರೂ. ಮೌಲ್ಯದ 2.2 ಎಕರೆ ಜಮೀನು ಮಾರಾಟಕ್ಕೆ ಚಿಂತನೆ ನಡೆಸಿದ್ದರು. ನಾರಾಯಣಸ್ವಾಮಿ ಅವರಿಗೆ ಆ ಜಮೀನು ತಮ್ಮ ತಾಯಿಯಿಂದ ಬಂದಿದ್ದು, ಇದನ್ನು ಉದ್ಯಮಿ ಮಹೇಶ್​ಗೆ​ ಮಾರಾಟ ಮಾಡಲು ಮುಂದಾಗಿದ್ದರು. ಆದರೆ ಜಮೀನಿನ ದಾಖಲೆಗಳು ಸರಿಯಾಗಿ ಇಲ್ಲದ ಕಾರಣ ಅದನ್ನು ಸರಿಪಡಿಸಲು 3 ವರ್ಷಗಳ ಕಾಲ ಸಮಯ ತೆಗೆದುಕೊಂಡಿದ್ದರು.

2018ರಲ್ಲಿ ಸಮಸ್ಯೆ ಬಗೆಹರಿದ ಬಳಿಕ ಈ ವಿಚಾರಕ್ಕೆ ಮಗ ಮಧುವನ್‌ ಎಂಟ್ರಿಯಾಗಿತ್ತು. ಜಮೀನು ಮಾರಾಟ ಮಾಡಲು ಅವರು ಒಪ್ಪದ ಕಾರಣ ಕಳೆದ 7 ವರ್ಷಗಳಿಂದ ಜಮೀನು ವಿಚಾರವಾಗಿ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಅದೇ ರೀತಿ ನಿನ್ನೆ ಕೂಡ ಮಹೇಶ್‌, ಮಧುವನ್‌ನ ಮಾತನಾಡಿಸಲು ಬಂದಿದ್ದ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ತೋಟದಲ್ಲೇ ಇದ್ದ ಮಚ್ಚಿನಿಂದ ಮಹೇಶ್‌ ಕೊಚ್ಚಿ ಕೊಲೆ ಮಾಡಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

19 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago