Featured

ಜಾತಿ, ಧರ್ಮವನ್ನು ಮರೆತು ಹಿಂದೂ ಯುವತಿಯ ವಿವಾಹಕ್ಕೆ ನೆರವಾದ ಮುಸ್ಲಿಂ ಬಾಂಧವರು – Vishwanews24

ಉಪ್ಪಿನಂಗಡಿ: ತೀರಾ ಬಡ ಕುಟುಂಬದ ಹಿಂದೂ ಧರ್ಮದ ಯುವತಿಯ ಮದುವೆಯೊಂದನ್ನು ನೆರೆಯ ಮುಸ್ಲಿಂಮರೇ ಮುಂದೆ ನಿಂತು ಮಾಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರ ನಡೆದಿದೆ.

ತೀರಾ ಬಡ ಕುಟುಂಬದ ರೇವತಿ ಫ್ಯಾಕ್ಟರಿಯೊಂದರಲ್ಲಿ ದುಡಿಯುತ್ತಿದ್ದು, ಈಕೆಗೆ ಸಾಲ್ಮರದ ಯುವಕ ಶರತ್‌ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈಕೆಗೆ ತಂದೆ ತಾಯಿ ಇದ್ದರೂ ಮುಂದೆ ನಿಂತು ಮದುವೆ ಮಾಡಿಸುವಷ್ಟು ಅವರು ಶಕ್ತರಾಗಿರಲಿಲ್ಲ. ಹೀಗಿರುವಾಗ ಅವರ ನೆರವಿಗೆ ಬಂದಿದ್ದು, ಅವರ ಮನೆ ಸಮೀಪದ ಮುಸ್ಲಿಮ್‌ ಯುವಕರು.

ಮಾನವೀಯತೆಯ ನಂಟಿನಿಂದ ಹುಡುಗಿಯ ಪರವಾಗಿ ಹುಡುಗನ ಮನೆಯವರನ್ನು ಮಾತನಾಡಿಸಿ ಮದುವೆಗೆ ದಿನ ನಿಗದಿ ಪಡಿಸಿದರು. ಈ ಸಂದರ್ಭ ಅವರೊಂದಿಗೆ ಯುವತಿಯ ಕೆಲ ಬಂಧುಗಳು ಕೂಡಿಕೊಂಡರು. ಅಕ್ಕ ಪಕ್ಕದ ಮನೆಗಳಿಂದ ಸೋಗೆಯನ್ನು ತಂದು ಚಪ್ಪರ ಹಾಕಿದರು.

ಲತೀಫ್‌ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ ಹಿಂದೂ ಸಂಪ್ರದಾಯದಂತೆ ವಿವಾಹ ಶಾಸ್ತ್ರವನ್ನು ನೆರವೇರಿಸಿದರು. ಮದುವೆಯ ಅಂಗವಾಗಿ 150 ಮಂದಿಗೆ ಮಾಂಸದೂಟವನ್ನೂ ಸಿದ್ಧಪಡಿಸಿ ಉಣಬಡಿಸಿದರು.ಮಾಂಗಲ್ಯ ಸೂತ್ರ, ಮದುಮಗಳ 2 ಜತೆ ವಸ್ತ್ರವನ್ನೊಳಗೊಂಡಂತೆ ಎಲ್ಲಾ ಕಾರ್ಯಕ್ಕೆ ತಗುಲಿದ ವೆಚ್ಚವನ್ನು ಲತೀಫ್, ನಿಹಾ ಡ್ರೆಸ್ಸಸ್ ನ ಮಾಲೀಕ ಕೆ.ಅಬೂಬಕ್ಕರ್, ಶಮೀರ್, ಪುತ್ತುಮೋನು ಮತ್ತಿತರರು ಭರಿಸಿ ಮಾನವೀಯತೆ ಮೆರೆದರು.

ಜಾತಿ, ಧರ್ಮ ಮರೆತು ಹೆಣ್ಣುಮಗಳ ಬಾಳಿಗೆ ಬೆಳಕಾಗುವ ಮೂಲಕ ಈ ಮುಸ್ಲಿಂ ಬಾಂಧವರ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

13 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

16 hours ago