Featured

ಜಾತಿ, ಧರ್ಮವನ್ನು ಮರೆತು ಹಿಂದೂ ಯುವತಿಯ ವಿವಾಹಕ್ಕೆ ನೆರವಾದ ಮುಸ್ಲಿಂ ಬಾಂಧವರು – Vishwanews24

ಉಪ್ಪಿನಂಗಡಿ: ತೀರಾ ಬಡ ಕುಟುಂಬದ ಹಿಂದೂ ಧರ್ಮದ ಯುವತಿಯ ಮದುವೆಯೊಂದನ್ನು ನೆರೆಯ ಮುಸ್ಲಿಂಮರೇ ಮುಂದೆ ನಿಂತು ಮಾಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರ ನಡೆದಿದೆ.

ತೀರಾ ಬಡ ಕುಟುಂಬದ ರೇವತಿ ಫ್ಯಾಕ್ಟರಿಯೊಂದರಲ್ಲಿ ದುಡಿಯುತ್ತಿದ್ದು, ಈಕೆಗೆ ಸಾಲ್ಮರದ ಯುವಕ ಶರತ್‌ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈಕೆಗೆ ತಂದೆ ತಾಯಿ ಇದ್ದರೂ ಮುಂದೆ ನಿಂತು ಮದುವೆ ಮಾಡಿಸುವಷ್ಟು ಅವರು ಶಕ್ತರಾಗಿರಲಿಲ್ಲ. ಹೀಗಿರುವಾಗ ಅವರ ನೆರವಿಗೆ ಬಂದಿದ್ದು, ಅವರ ಮನೆ ಸಮೀಪದ ಮುಸ್ಲಿಮ್‌ ಯುವಕರು.

ಮಾನವೀಯತೆಯ ನಂಟಿನಿಂದ ಹುಡುಗಿಯ ಪರವಾಗಿ ಹುಡುಗನ ಮನೆಯವರನ್ನು ಮಾತನಾಡಿಸಿ ಮದುವೆಗೆ ದಿನ ನಿಗದಿ ಪಡಿಸಿದರು. ಈ ಸಂದರ್ಭ ಅವರೊಂದಿಗೆ ಯುವತಿಯ ಕೆಲ ಬಂಧುಗಳು ಕೂಡಿಕೊಂಡರು. ಅಕ್ಕ ಪಕ್ಕದ ಮನೆಗಳಿಂದ ಸೋಗೆಯನ್ನು ತಂದು ಚಪ್ಪರ ಹಾಕಿದರು.

ಲತೀಫ್‌ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ ಹಿಂದೂ ಸಂಪ್ರದಾಯದಂತೆ ವಿವಾಹ ಶಾಸ್ತ್ರವನ್ನು ನೆರವೇರಿಸಿದರು. ಮದುವೆಯ ಅಂಗವಾಗಿ 150 ಮಂದಿಗೆ ಮಾಂಸದೂಟವನ್ನೂ ಸಿದ್ಧಪಡಿಸಿ ಉಣಬಡಿಸಿದರು.ಮಾಂಗಲ್ಯ ಸೂತ್ರ, ಮದುಮಗಳ 2 ಜತೆ ವಸ್ತ್ರವನ್ನೊಳಗೊಂಡಂತೆ ಎಲ್ಲಾ ಕಾರ್ಯಕ್ಕೆ ತಗುಲಿದ ವೆಚ್ಚವನ್ನು ಲತೀಫ್, ನಿಹಾ ಡ್ರೆಸ್ಸಸ್ ನ ಮಾಲೀಕ ಕೆ.ಅಬೂಬಕ್ಕರ್, ಶಮೀರ್, ಪುತ್ತುಮೋನು ಮತ್ತಿತರರು ಭರಿಸಿ ಮಾನವೀಯತೆ ಮೆರೆದರು.

ಜಾತಿ, ಧರ್ಮ ಮರೆತು ಹೆಣ್ಣುಮಗಳ ಬಾಳಿಗೆ ಬೆಳಕಾಗುವ ಮೂಲಕ ಈ ಮುಸ್ಲಿಂ ಬಾಂಧವರ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago