ಉಪ್ಪಿನಂಗಡಿ: ತೀರಾ ಬಡ ಕುಟುಂಬದ ಹಿಂದೂ ಧರ್ಮದ ಯುವತಿಯ ಮದುವೆಯೊಂದನ್ನು ನೆರೆಯ ಮುಸ್ಲಿಂಮರೇ ಮುಂದೆ ನಿಂತು ಮಾಡುವ ಮೂಲಕ ಸೌಹಾರ್ದತೆ ಮೆರೆದ ಘಟನೆ ಉಪ್ಪಿನಂಗಡಿ ಸಮೀಪದ ಕರುವೇಲು ಎಂಬಲ್ಲಿ ಸೋಮವಾರ ನಡೆದಿದೆ.
ಮಾನವೀಯತೆಯ ನಂಟಿನಿಂದ ಹುಡುಗಿಯ ಪರವಾಗಿ ಹುಡುಗನ ಮನೆಯವರನ್ನು ಮಾತನಾಡಿಸಿ ಮದುವೆಗೆ ದಿನ ನಿಗದಿ ಪಡಿಸಿದರು. ಈ ಸಂದರ್ಭ ಅವರೊಂದಿಗೆ ಯುವತಿಯ ಕೆಲ ಬಂಧುಗಳು ಕೂಡಿಕೊಂಡರು. ಅಕ್ಕ ಪಕ್ಕದ ಮನೆಗಳಿಂದ ಸೋಗೆಯನ್ನು ತಂದು ಚಪ್ಪರ ಹಾಕಿದರು.
ಲತೀಫ್ ಎಂಬವರ ಮನೆಯಲ್ಲಿ ಮದುಮಗಳನ್ನು ಶೃಂಗರಿಸಿ ಹಿಂದೂ ಸಂಪ್ರದಾಯದಂತೆ ವಿವಾಹ ಶಾಸ್ತ್ರವನ್ನು ನೆರವೇರಿಸಿದರು. ಮದುವೆಯ ಅಂಗವಾಗಿ 150 ಮಂದಿಗೆ ಮಾಂಸದೂಟವನ್ನೂ ಸಿದ್ಧಪಡಿಸಿ ಉಣಬಡಿಸಿದರು.ಮಾಂಗಲ್ಯ ಸೂತ್ರ, ಮದುಮಗಳ 2 ಜತೆ ವಸ್ತ್ರವನ್ನೊಳಗೊಂಡಂತೆ ಎಲ್ಲಾ ಕಾರ್ಯಕ್ಕೆ ತಗುಲಿದ ವೆಚ್ಚವನ್ನು ಲತೀಫ್, ನಿಹಾ ಡ್ರೆಸ್ಸಸ್ ನ ಮಾಲೀಕ ಕೆ.ಅಬೂಬಕ್ಕರ್, ಶಮೀರ್, ಪುತ್ತುಮೋನು ಮತ್ತಿತರರು ಭರಿಸಿ ಮಾನವೀಯತೆ ಮೆರೆದರು.
ಜಾತಿ, ಧರ್ಮ ಮರೆತು ಹೆಣ್ಣುಮಗಳ ಬಾಳಿಗೆ ಬೆಳಕಾಗುವ ಮೂಲಕ ಈ ಮುಸ್ಲಿಂ ಬಾಂಧವರ ಕಾರ್ಯ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…