Featured

ಜಾತಿ ನಿಂದನೆ ಆರೋಪ : ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧ ಎಫ್‌ ಐಆರ್‌ ದಾಖಲು – vishwanews24

ಅವಹೇಳನ ಪದ ಬಳಸಿ ಬೋವಿ ಜನಾಂಗಕ್ಕೆ ಅವಮಾನ: ಬಿಗ್‌ ಬಾಸ್‌ ಸ್ಪರ್ಧಿ ತನಿಷಾ ವಿರುದ್ಧ ಎಫ್‌ ಐಆರ್‌ ದಾಖಲು

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ನಲ್ಲಿ ಸ್ಪರ್ಧಿಯಾಗಿರುವ ಆಧುನಿಕ ಕೃಷಿಕ ವರ್ತೂರು ಸಂತೋಷ್‌ ವಿರುದ್ಧ ಕಳೆದ ಕೆಲ ದಿನಗಳ ಹಿಂದೆ ಹುಲಿ ಉಗುರು ಧರಿಸಿದ್ದಕ್ಕೆ ದೂರು ದಾಖಲಾಗಿತ್ತು. ತೀವ್ರ ವಿಚಾರಣೆ ಬಳಿಕ ವರ್ತೂರು ಅವರಿಗೆ ಜಾಮೀನು ಸಿಕ್ಕಿದೆ.

ಇದೀಗ ಬಿಗ್‌ ಬಾಸ್‌ ನ ಮತ್ತೊಬ್ಬ ಸ್ಪರ್ಧಿ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಕಿರುತೆರೆ ನಟಿಯಾಗಿ , ಸಿನಿಮಾಗಳಲ್ಲೂ ನಟಿಸಿರುವ ತನಿಷಾ ಕುಪ್ಪಂಡ ಈ ಬಾರಿಯ ಬಿಗ್‌ ಬಾಸ್‌ ನಲ್ಲಿ ಪ್ರಬಲ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ.

ಇದೀಗ ತನಿಷಾ ಅವರ ವಿರುದ್ಧ ಜಾತಿ ನಿಂದನೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬವರು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ ಸಿ ಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.

ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲಿ ಅವಹೇಳನಕಾರಿ ಪದ ಬಳಕೆ ಆರೋಪಿಸಿ ಅವರು ದೂರು ನೀಡಿದ್ದಾರೆ. ಪದಬಳಕೆ ಮಾಡಿ ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಬಿಗ್ ಬಾಸ್ ಮನೆಯಿಂದ ಹೊರ ಹಾಕಬೇಕೆಂದು ಎಸ್ ಸಿ ಎಸ್ಟಿ ಕಾಯ್ದೆಡಿ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲಾಗಿದೆ.

Vishwa News 24

Recent Posts

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

10 minutes ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

17 minutes ago

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

2 hours ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

3 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

3 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

4 hours ago