Featured

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ  – vishwanews24

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ

ಮೈಸೂರು: ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಆಚರಣೆಯನ್ನು ಉದ್ಘಾಟಿಸಿ ನಂತರ ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಹೇಳಿದರು.

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ಉಪ್ಪಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದೇವೆಂದು ತಿಳಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ. ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು. ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ ಎಂದು ಭರವಸೆ ನೀಡಿದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

7 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago