Featured

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ  – vishwanews24

ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ : ಸಿದ್ದರಾಮಯ್ಯ

ಮೈಸೂರು: ಜಾತಿ ಭೇದವಿಲ್ಲದೆ ಎಲ್ಲಾ ಸಮುದಾಯಗಳ ಸಮಗ್ರ ಅಭಿವೃದ್ಧಿ ಮಾಡುವುದಷ್ಟೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಆಚರಣೆಯನ್ನು ಉದ್ಘಾಟಿಸಿ ನಂತರ ಉಪ್ಪಾರ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದು ಹೇಳಿದರು.

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ಉಪ್ಪಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದೇವೆಂದು ತಿಳಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ. ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು. ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ ಎಂದು ಭರವಸೆ ನೀಡಿದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago