ಕೊಲ್ಲಂ: ಜಾತ್ರೆಯಲ್ಲಿ ತಂದೆಯ ಕೈಯಿಂದ ಆಕಸ್ಮಿಕವಾಗಿ ಜಾರಿ ಬಿದ್ದ ಬಾಲಕಿ ರಥದ ಚಕ್ರದಡಿ ಸಿಲುಕಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೇರಳದ ಕೊಲ್ಲಂನಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಚವರ ಮೂಲದ ರಮೇಶನ್ ಹಾಗೂ ಜೀಜಿ ದಂಪತಿಯ ಪುತ್ರಿ ಕ್ಷೇತ್ರ(5) ಮೃತಪಟ್ಟ ಬಾಲಕಿ. ಕ್ಷೇತ್ರ ಅಪ್ಪ ಅಮ್ಮನೊಂದಿಗೆ ಕೊಟ್ಟಂಕುಳಂಗರ ದೇವಸ್ಥಾನದ ಜಾತ್ರೆಗೆ ಬಂದಿದ್ದಾಳೆ. ರಥ ಎಳೆಯುವ ಸಂದರ್ಭ ಜನರ ನೂಕುನುಗ್ಗಲು ಹೆಚ್ಚಾಗಿ, ಕ್ಷೇತ್ರ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದಾಳೆ. ಬಳಿಕ ಬಾಲಕಿಯ ಮೇಲೆ ರಥದ ಚಕ್ರ ಹರಿದಿದೆ. ಪರಿಣಾಮ ಕ್ಷೇತ್ರ ಸಾವನ್ನಪ್ಪಿದ್ದಾಳೆ.
ಕ್ಷೇತ್ರಳ ಮೇಲೆ ಚಕ್ರ ಹರಿದ ಬಳಿಕ ತಕ್ಷಣ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…