Featured

ಜಾನುವಾರುಗಳಿಗೆ ಚರ್ಮಗಂಟು ರೋಗ –  ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧ : ಜಿಲ್ಲಾಧಿಕಾರಿ ಆರ್.ಲತಾ ಆದೇಶ  – Vishwanews24

ಜಾನುವಾರುಗಳಿಗೆ ಚರ್ಮಗಂಟು ರೋಗ –  ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧ : ಜಿಲ್ಲಾಧಿಕಾರಿ ಆರ್.ಲತಾ ಆದೇಶ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,037 ಜಾನುವಾರುಗಳಿಗೆ ಚರ್ಮಗಂಟು ರೋಗದ ಲಕ್ಷಣ ಕಂಡುಬಂದಿದ್ದು, 154 ಜಾನುವಾರುಗಳು ಮರಣ ಹೊಂದಿವೆ. ಜಾನುವಾರುಗಳಿಗೆ ಹರಡುತ್ತಿರುವ ರೋಗದ ನಿಯಂತ್ರಣಕ್ಕಾಗಿ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ದ. ಪಕ್ಕದ ತಮಿಳುನಾಡು ಮತ್ತು ಆಂಧ್ರಪ್ರದೇಶದ ರೈತರು ಸಹ ಜಾತ್ರೆಗೆ ಬಂದು ದನಗಳ ವ್ಯಾಪಾರ ಮಾಡುತ್ತಾರೆ. ಡಿಸೆಂಬರ್ 20ರಂದು ಈ ವರ್ಷದ ಘಾಟಿ ದನಗಳ ಜಾತ್ರೆಗೆ ಸಿದ್ಧತೆ ನಡೆದಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿವೆ. ಮುಂಜಾಗ್ರತಾ ಕ್ರಮವಾಗಿ 1,51,526 ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಜಿಲ್ಲೆಯ ವಿವಿಧೆಡೆ ದನಗಳ ಜಾತ್ರೆ ನಡೆಯುತ್ತದೆ. ದನಗಳು ಒಂದೆಡೆ ಸೇರುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ ಈ ಬಗ್ಗೆ ಮಾತನಾಡಿ, ಚರ್ಮಗಂಟು ರೋಗದ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾನುವಾರುಗಳ ಜಾತ್ರೆಗೆ ನಿಷೇಧ ಮಾಡುವುದಾಗಿ ಹೇಳಿದ್ದರು. ಸಚಿವರ ಸೂಚನೆಯಂತೆ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯ ವಸ್ತುಸ್ಥಿತಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರು. ಚರ್ಮಗಂಟು ರೋಗವನ್ನು ನಿಯಂತ್ರಣ ಮಾಡಲು ಕರ್ನಾಟಕ ಅನಿಮಲ್ ಡಿಸೀಸ್ 1961ರ ಕಾಯ್ದೆ ಪ್ರಕಾರ, 2023ರ ಜನವರಿ 30ರವರೆಗೂ ಜಿಲ್ಲೆಯಲ್ಲಿ ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆ ಮಾಡದಂತೆ ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago