ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

Featured, ರಾಜ್ಯ ನ್ಯೂಸ್

ಜಾರಕಿಹೊಳಿ ಸಿಡಿ ಪ್ರಕರಣ : ದೂರು ನೀಡಲು ಮುಂದಾದ ಸಿಡಿ ಲೇಡಿ -Vishwanews24

ಬೆಂಗಳೂರು, :ಲೈಂಗಿಕ ಹಗರಣದ ಸಿಡಿ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಸಿಡಿಯಲ್ಲಿ ಇದ್ದಾರೆ ಎಂದು ಶಂಕಿಸಲಾದ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ.

ಇಂದು ಮೂರನೇ ಸಿಡಿಯನ್ನು ಬಿಡುಗಡೆ ಮಾಡಿರುವ ಯುವತಿ ತಮಗೆ ವ್ಯಕ್ತವಾದ ಅಭೂತ ಪೂರ್ವ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದ್ದು, ವಕೀಲರಾದ ಜಗದೀಶ್ ಅವರ ಮೂಲಕ ಮಾಜಿ ಸಚಿವ ರಮೇಶ್‍ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

ಈ ಮೂಲಕ ರಮೇಶ್ ಜಾರಕಿಹೊಳಿ ಹೊಸ ಸಂಕಟಕ್ಕೆ ಸಿಲುಕಿದಂತಾಗಿದೆ. ಈವರೆಗೂ ಯುವತಿ ಹೇಳಿಕೆ ಇಲ್ಲ. ಯಾವುದೇ ದೂರು ಬಂದಿಲ್ಲ ಎಂಬ ಕಾರಣಕ್ಕಾಗಿ ತನಿಖೆಗೆ ಭಾರೀ ಹಿನ್ನಡೆಯಾಗಿತ್ತು. ಈಗ ಯುವತಿ ಪರವಾಗಿ ವಕೀಲ ಜಗದೀಶ್ ದೂರು ನೀಡುತ್ತಿರುವುದು ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಂತಾಗಿದೆ.

ಇದನ್ನೂ ಓದಿ : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವ ಸೆರೆ -Vishwanews24

ಸಿಡಿಯಲ್ಲಿ ಮಾತನಾಡಿರುವ ಯುವತಿ ಕಳೆದ 24 ದಿನಗಳಿಂದ ನಾನು ಪ್ರಾಣ ಭಯದಲ್ಲಿ ಇದ್ದೆ. ಕರ್ನಾಟಕದ ಜನತೆ, ವಿವಿಧ ಸಂಘಟನೆಗಳು, ಎಲ್ಲಾ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರಿಂದ ನನಗೆ ಧೈರ್ಯ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಯುವತಿ ಪರವಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಿರುವ ವಕೀಲ ಜಗದೀಶ್ ಅವರು ಸುದ್ದಿಗಾರರ ಜತೆ ಮಾತನಾಡಿ, ಕಳೆದ ಒಂದು ವಾರಗಳಿಂದ ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಗಮನಿಸಿ ನಾವು ಯುವತಿಯನ್ನು ಸಂಪರ್ಕಿಸಿ ಕಾನೂನಿನ ನೆರವು ನೀಡುವುದಾಗಿ ಹೇಳಿದ್ದೆವು. ಅದಕ್ಕೆ ಆಕೆ ಒಪ್ಪಿಕೊಂಡಿದ್ದಾರೆ.ದೂರು ನೀಡುವಂತೆ ನಮಗೆ ಮನವಿ ಮಾಡಿದ್ದು, ಪತ್ರ ಹಾಗೂ ವಿಡಿಯೋ ಕಳುಹಿಸಿದ್ದಾರೆ. ಅದರ ಪ್ರಕಾರ ನಾವು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತಿದ್ದೇವೆ ಎಂದರು. ದೂರು ನೀಡಿದ ಬಳಿಕ ಪೊಲೀಸರ ಪ್ರತಿಕ್ರಿಯೆ ನೋಡಿಕೊಂಡು ಯುವತಿಯನ್ನು ಹಾಜರುಪಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.

ಇದನ್ನೂ ಓದಿ :ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ : ರಾಹುಲ್ ಗಾಂಧಿ -Vishwanews24