ಬೆಂಗಳೂರು, :ಲೈಂಗಿಕ ಹಗರಣದ ಸಿಡಿ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಸಿಡಿಯಲ್ಲಿ ಇದ್ದಾರೆ ಎಂದು ಶಂಕಿಸಲಾದ ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುವುದಾಗಿ ಹೇಳಿದ್ದಾರೆ.
ಇಂದು ಮೂರನೇ ಸಿಡಿಯನ್ನು ಬಿಡುಗಡೆ ಮಾಡಿರುವ ಯುವತಿ ತಮಗೆ ವ್ಯಕ್ತವಾದ ಅಭೂತ ಪೂರ್ವ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಾಗಿದ್ದು, ವಕೀಲರಾದ ಜಗದೀಶ್ ಅವರ ಮೂಲಕ ಮಾಜಿ ಸಚಿವ ರಮೇಶ್ಜಾರಕಿಹೊಳಿ ವಿರುದ್ಧ ದೂರು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.
ಈ ಮೂಲಕ ರಮೇಶ್ ಜಾರಕಿಹೊಳಿ ಹೊಸ ಸಂಕಟಕ್ಕೆ ಸಿಲುಕಿದಂತಾಗಿದೆ. ಈವರೆಗೂ ಯುವತಿ ಹೇಳಿಕೆ ಇಲ್ಲ. ಯಾವುದೇ ದೂರು ಬಂದಿಲ್ಲ ಎಂಬ ಕಾರಣಕ್ಕಾಗಿ ತನಿಖೆಗೆ ಭಾರೀ ಹಿನ್ನಡೆಯಾಗಿತ್ತು. ಈಗ ಯುವತಿ ಪರವಾಗಿ ವಕೀಲ ಜಗದೀಶ್ ದೂರು ನೀಡುತ್ತಿರುವುದು ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಂತಾಗಿದೆ.
ಇದನ್ನೂ ಓದಿ : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಓರ್ವ ಸೆರೆ -Vishwanews24
ಸಿಡಿಯಲ್ಲಿ ಮಾತನಾಡಿರುವ ಯುವತಿ ಕಳೆದ 24 ದಿನಗಳಿಂದ ನಾನು ಪ್ರಾಣ ಭಯದಲ್ಲಿ ಇದ್ದೆ. ಕರ್ನಾಟಕದ ಜನತೆ, ವಿವಿಧ ಸಂಘಟನೆಗಳು, ಎಲ್ಲಾ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದರಿಂದ ನನಗೆ ಧೈರ್ಯ ಬಂದಿದೆ. ಹಾಗಾಗಿ ದೂರು ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಯುವತಿ ಪರವಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಿರುವ ವಕೀಲ ಜಗದೀಶ್ ಅವರು ಸುದ್ದಿಗಾರರ ಜತೆ ಮಾತನಾಡಿ, ಕಳೆದ ಒಂದು ವಾರಗಳಿಂದ ಮಾಧ್ಯಮಗಳಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ಗಮನಿಸಿ ನಾವು ಯುವತಿಯನ್ನು ಸಂಪರ್ಕಿಸಿ ಕಾನೂನಿನ ನೆರವು ನೀಡುವುದಾಗಿ ಹೇಳಿದ್ದೆವು. ಅದಕ್ಕೆ ಆಕೆ ಒಪ್ಪಿಕೊಂಡಿದ್ದಾರೆ.ದೂರು ನೀಡುವಂತೆ ನಮಗೆ ಮನವಿ ಮಾಡಿದ್ದು, ಪತ್ರ ಹಾಗೂ ವಿಡಿಯೋ ಕಳುಹಿಸಿದ್ದಾರೆ. ಅದರ ಪ್ರಕಾರ ನಾವು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತಿದ್ದೇವೆ ಎಂದರು. ದೂರು ನೀಡಿದ ಬಳಿಕ ಪೊಲೀಸರ ಪ್ರತಿಕ್ರಿಯೆ ನೋಡಿಕೊಂಡು ಯುವತಿಯನ್ನು ಹಾಜರುಪಡಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು.
ಇದನ್ನೂ ಓದಿ :ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ : ರಾಹುಲ್ ಗಾಂಧಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…