ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಸಾರ್ವಜನಿಕ ಸಹಕಾರದೊಂದಿಗೆ ಪೇಜಾವರ ಶ್ರೀಗಳ ಭವ್ಯ ಸ್ಮಾರಕ ನಿರ್ಮಿಸಲಿದ್ದೇವೆ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ: ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಪೇಜಾವರ ಶ್ರೀಗಳ ಭವ್ಯ ಸ್ಮಾರಕವನ್ನು ಸಾರ್ವಜನಿಕ ಸಹಕಾರದೊಂದಿಗೆ ನಿರ್ಮಿಸಲಿದ್ದೇವೆ ಎಂದು ಮೀನುಗಾರ ಮುಖಂಡ ಯಶಪಾಲ ಸುವರ್ಣ  ತಿಳಿಸಿದ್ದಾರೆ.

ಇತ್ತೀಚೆಗೆ ಕೃಷ್ಣೈಕ್ಯರಾದ  ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಸಂಪೂರ್ಣ ಜೀವಿತವನ್ನು ಸಮಾಜದ ಉನ್ನತಿಗೆ ಮುಡಿಪಾಗಿಟ್ಟ ಹಿರಿಯರು.ಸಮಾಜದ ಅವರ ಬದುಕಿನಿಂದ ನಮ್ಮ ಮುಂದಿನ ಪೀಳಿಗೆ ಪ್ರೇರಣೆ ಪಡೆಯ ಬೇಕಾದರೆ ಅವರ ಭವ್ಯ ಸ್ಮಾರಕವೊಂದು ನಿರ್ಮಾಣವಾಗಬೇಕು. ಉಡುಪಿಯ ಪ್ರಸಿದ್ಧ ಪ್ರವಾಸಿತಾಣವಾಗಿರುವ ತೋನ್ಸೆಪಾರ್ ದ್ವೀಪದಲ್ಲಿ ಪೂಜ್ಯ ಶ್ರೀಗಳ ಸುಂದರ ಪುತ್ಥಳಿ ಮತ್ತು ಅವರ ಬದುಕಿನ ಸಾಧನೆಗಳನ್ನು ಬಿಂಬಿಸುವ ಪುಟ್ಟ ಆಡಿಟೋರಿಯಂ ಒಂದನ್ನು ರಚಿಸಲು ನಾವು ಸಿದ್ಧರಿದ್ದು ಜಿಲ್ಲಾಡಳಿತ ಈ ಕಾರ್ಯಕ್ಕೆ ಅನುಮತಿ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.

ಸಂತನ ಬದುಕು ಲೋಕದ ಹಿತಕ್ಕೆ ಎಂಬ ಮಾತನ್ನು ಅಕ್ಷರಶಃ ಪಾಲಿಸಿದವರು ಪೇಜಾವರ ಶ್ರೀಗಳು.ಅವರು ಕೇವಲ ಮಧ್ವಮತದ ಪ್ರಸಾರಕ್ಕಷ್ಟೇ ಸೀಮಿತಗೊಳ್ಳದೆ ಎಲ್ಲಾ ಸಮಾಜಗಳ ಸಂಘಟನೆಗೆ ಮಹತ್ವ ನೀಡುತ್ತಾ ರಾಷ್ಟ್ರೀಯ ವಿಚಾರಗಳಿಗೆ ಸ್ಪಂದಿಸುತ್ತಾ ತನ್ನ ಇಳಿ ವಯಸ್ಸಿನಲ್ಲೂ ಪಾದರಸದಂತೆ ಸಂಚರಿಸುತ್ತಿದ್ದವರು. ಅಂತರಾಷ್ಟ್ರೀಯ ಸ್ತರದಲ್ಲಿ ಉಡುಪಿಯ ಕೀರ್ತಿಯನ್ನು ಎತ್ತಿ ಹಿಡಿದವರು ಪೇಜಾವರ ಶ್ರೀಗಳು. ಸರಳ ಬದುಕನ್ನು ನಡೆಸಿದ ಯತಿಶ್ರೇಷ್ಠರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಕೇಂದ್ರಗಳನ್ನು ಗೋಶಾಲೆಗಳನ್ನು ಬಿಟ್ಟು ಹೋಗಿದ್ದಾರೆ.

ಪೇಜಾವರಶ್ರೀಗಳ ಸ್ಮಾರಕ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದ್ದು ಪೇಜಾವರ ಶ್ರೀಗಳ ಸ್ಮಾರಕ ರಚನೆಗೆ ಜಿಲ್ಲಾಡಳಿತ ತನ್ನ ಪೂರ್ಣ ಸಹಕಾರ ನೀಡಬೇಕು ಎಂದು ಅವರು  ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago