ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಸಾರ್ವಜನಿಕ ಸಹಕಾರದೊಂದಿಗೆ ಪೇಜಾವರ ಶ್ರೀಗಳ ಭವ್ಯ ಸ್ಮಾರಕ ನಿರ್ಮಿಸಲಿದ್ದೇವೆ : ಯಶ್ ಪಾಲ್ ಸುವರ್ಣ -Vishwanews24

ಉಡುಪಿ: ಜಿಲ್ಲಾಡಳಿತ ಅನುಮತಿ ನೀಡಿದರೆ ಮಲ್ಪೆ ದ್ವೀಪದಲ್ಲಿ ಪೇಜಾವರ ಶ್ರೀಗಳ ಭವ್ಯ ಸ್ಮಾರಕವನ್ನು ಸಾರ್ವಜನಿಕ ಸಹಕಾರದೊಂದಿಗೆ ನಿರ್ಮಿಸಲಿದ್ದೇವೆ ಎಂದು ಮೀನುಗಾರ ಮುಖಂಡ ಯಶಪಾಲ ಸುವರ್ಣ  ತಿಳಿಸಿದ್ದಾರೆ.

ಇತ್ತೀಚೆಗೆ ಕೃಷ್ಣೈಕ್ಯರಾದ  ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಸಂಪೂರ್ಣ ಜೀವಿತವನ್ನು ಸಮಾಜದ ಉನ್ನತಿಗೆ ಮುಡಿಪಾಗಿಟ್ಟ ಹಿರಿಯರು.ಸಮಾಜದ ಅವರ ಬದುಕಿನಿಂದ ನಮ್ಮ ಮುಂದಿನ ಪೀಳಿಗೆ ಪ್ರೇರಣೆ ಪಡೆಯ ಬೇಕಾದರೆ ಅವರ ಭವ್ಯ ಸ್ಮಾರಕವೊಂದು ನಿರ್ಮಾಣವಾಗಬೇಕು. ಉಡುಪಿಯ ಪ್ರಸಿದ್ಧ ಪ್ರವಾಸಿತಾಣವಾಗಿರುವ ತೋನ್ಸೆಪಾರ್ ದ್ವೀಪದಲ್ಲಿ ಪೂಜ್ಯ ಶ್ರೀಗಳ ಸುಂದರ ಪುತ್ಥಳಿ ಮತ್ತು ಅವರ ಬದುಕಿನ ಸಾಧನೆಗಳನ್ನು ಬಿಂಬಿಸುವ ಪುಟ್ಟ ಆಡಿಟೋರಿಯಂ ಒಂದನ್ನು ರಚಿಸಲು ನಾವು ಸಿದ್ಧರಿದ್ದು ಜಿಲ್ಲಾಡಳಿತ ಈ ಕಾರ್ಯಕ್ಕೆ ಅನುಮತಿ ನೀಡಬೇಕು ಎಂದು ಅವರು ವಿನಂತಿಸಿದ್ದಾರೆ.

ಸಂತನ ಬದುಕು ಲೋಕದ ಹಿತಕ್ಕೆ ಎಂಬ ಮಾತನ್ನು ಅಕ್ಷರಶಃ ಪಾಲಿಸಿದವರು ಪೇಜಾವರ ಶ್ರೀಗಳು.ಅವರು ಕೇವಲ ಮಧ್ವಮತದ ಪ್ರಸಾರಕ್ಕಷ್ಟೇ ಸೀಮಿತಗೊಳ್ಳದೆ ಎಲ್ಲಾ ಸಮಾಜಗಳ ಸಂಘಟನೆಗೆ ಮಹತ್ವ ನೀಡುತ್ತಾ ರಾಷ್ಟ್ರೀಯ ವಿಚಾರಗಳಿಗೆ ಸ್ಪಂದಿಸುತ್ತಾ ತನ್ನ ಇಳಿ ವಯಸ್ಸಿನಲ್ಲೂ ಪಾದರಸದಂತೆ ಸಂಚರಿಸುತ್ತಿದ್ದವರು. ಅಂತರಾಷ್ಟ್ರೀಯ ಸ್ತರದಲ್ಲಿ ಉಡುಪಿಯ ಕೀರ್ತಿಯನ್ನು ಎತ್ತಿ ಹಿಡಿದವರು ಪೇಜಾವರ ಶ್ರೀಗಳು. ಸರಳ ಬದುಕನ್ನು ನಡೆಸಿದ ಯತಿಶ್ರೇಷ್ಠರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಧಾರ್ಮಿಕ ಕೇಂದ್ರಗಳನ್ನು ಗೋಶಾಲೆಗಳನ್ನು ಬಿಟ್ಟು ಹೋಗಿದ್ದಾರೆ.

ಪೇಜಾವರಶ್ರೀಗಳ ಸ್ಮಾರಕ ನಿರ್ಮಾಣದಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದ್ದು ಪೇಜಾವರ ಶ್ರೀಗಳ ಸ್ಮಾರಕ ರಚನೆಗೆ ಜಿಲ್ಲಾಡಳಿತ ತನ್ನ ಪೂರ್ಣ ಸಹಕಾರ ನೀಡಬೇಕು ಎಂದು ಅವರು  ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago