ಮೈಸೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಶಾಸಕರ ನಡುವಿನ ಜಟಾಪಟಿ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಪ್ರತಿಕಿಯಿಸಿದ್ದಾರೆ. ಜಿಲ್ಲಾಧಿಕಾರಿ ಪರವಾಗಿ ಪ್ರತಾಪ್ ಸಿಂಹ ಭರ್ಜರಿಯಾಗಿ ಮಾತನಾಡಿದ್ದಾರೆ.
ಕ್ಷೇತ್ರದ ಜನರ ಸಮಸ್ಯೆ ಕೇಳಲು ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಕ್ಷೇತ್ರವನ್ನು ಯಾವ ಶಾಸಕರು ಹಾಗೂ ಎಂಪಿಗೂ ಬರೆದುಕೊಟ್ಟಿರುವುದಿಲ್ಲ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆ ಮುಗಿದ ಮೇಲೆ ನಾನು ಕೂಡ ಜನರ ಬಳಿ ಹೋಗುತ್ತೇನೆ. ಯಾರು ತಡೆಯುತ್ತಾರೆ ನೋಡೋಣ ಎಂದು ಗುಡುಗಿದ್ದಾರೆ.
ನಾಲ್ಕು ಜನ ಶಾಸಕರು ಒಟ್ಟಾಗಿ ಡಿಸಿ ವಿರುದ್ಧ ಸುದ್ದಿಗೋಷ್ಠಿ ನಡೆಸಿ ಹೆದರಿಸುತ್ತಿದ್ದೀರಾ? ನೀವೂ ಹೆದರಿಸಿದರೆ ನಾವು ಹೆದರಬೇಕಾ? ನೀವು ಜನರ ಸಮಸ್ಯೆ ಬಗೆಹರಿಸಿದ್ದರೆ, ಜನ ಯಾಕೆ ಡಿಸಿ ಬಳಿ ಕಷ್ಟ ಹೇಳಿಕೊಂಡು ಹೋಗುತ್ತಿದ್ದರು? ಎಂದು ಶಾಸಕರನ್ನು ಪ್ರಶ್ನಿಸಿದ್ದಾರೆ.
ಶಾಸಕರು, ಸಂಸದರು ಎಂಬುದು ಜನರ ಕೆಲಸ ಮಾಡಲು ಇರುವ ಹುದ್ದೆ ಅಷ್ಟೇ. ಡಿಸಿ ಜನರ ಬಳಿಗೆ ಹೋಗಿ ಅವರ ಸಮಸ್ಯೆ ಕೇಳುತ್ತಿದ್ದಾರೆ. ಇದನ್ನು ಎಲ್ಲರೂ ಬೆಂಬಲಿಸಬೇಕು. ನೀವು ಮಾಡಲು ಆಗದ ಕೆಲಸವನ್ನ ಡಿಸಿ ಮಾಡುತ್ತಿದ್ದಾರೆ, ಮಾಡಲು ಬಿಡಿ ಎಂದು ಕಟುವಾಗಿ ಹೇಳಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…