ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಿ ಆರ್ ಎಸ್ ಎಸ್ ಧ್ವಜವನ್ನು ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ ಉಡುಪಿಯ ಜಿಲ್ಲಾಧಿಕಾರಿ ಮಠದ ಆಡಳಿತಾಧಿಕಾರಿಯೇ? ಅಥವಾ ಉಡುಪಿ ನಗರಸಭೆಯ ಆಡಳಿತಾಧಿಕಾರಿಯೇ ?ಎಂಬುದನ್ನು ಅವರೇ ಸ್ಪಷ್ಟನೆ ನೀಡಬೇಕಾಗಿದೆ.
ಇದುವರೆಗಿನ ಉಡುಪಿ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ಜಿಲ್ಲಾಧಿಕಾರಿಗಳು ಆರ್ ಎಸ್ ಧ್ವಜವನ್ನು ಆರಿಸಿರಲಿಲ್ಲ. ಆದರೆ ಈ ಬಾರಿ ಉಡುಪಿಯ ಜಿಲ್ಲಾಧಿಕಾರಿಯವರು ಆರ್ಎಸ್ಎಸ್ ಧ್ವಜವನ್ನು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು. ಜಿಲ್ಲಾಧಿಕಾರಿ ತಾವು ಒಬ್ಬರು ಸರಕಾರದ ಪ್ರತಿನಿಧಿ ಎಂಬುದನ್ನು ಮರೆತಂತೆ ಇದೆ.
ನಮ್ಮ ದೇಶಕ್ಕೆ ನಮ್ಮ ರಾಷ್ಟ್ರಧ್ವಜ ಹೊರತು ಬೇರೆ ಯಾವುದೇ ಧ್ವಜಗಳು ಇರುವುದಿಲ್ಲ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರುಗಳು ಕೇವಲ ಮತಗಳಿಸಲಿಕ್ಕೋಸ್ಕರ ಈ ರೀತಿಯಾಗಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿದ್ದಾರೆ. ಮಾತ್ರವಲ್ಲದೆ ಉಡುಪಿಯ ಜಿಲ್ಲಾಧಿಕಾರಿಯವರನ್ನು ಕೂಡ ತಮ್ಮ ಹಿಂದುತ್ವದ ಬಲೆಯೊಳಗೆ ಸಿಲುಕಿರುತ್ತಾರೆ ಎಂಬುದು ಇಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ನಮ್ಮ ಬಿಜೆಪಿಯ ನಾಯಕರುಗಳಿಗೆ ಗೋಚರಿಸುತ್ತಿರುವುದು ಪಾಕಿಸ್ತಾನ ಧ್ವಜ ಮತ್ತೆ ಕಾಂಗ್ರೆಸ್ ಪಕ್ಷ. ಇದರಿಂದಾಗಿ ಇವರು ಜನರನ್ನು ಮೋಸಗೊಳಿಸಿ ತಮ್ಮ ಗೆಲುವನ್ನು ಸಾಧಿಸಲು ಹೊರಟಿರುತ್ತಾರೆ. ಇಂತಹ ದುಷ್ಟಶಕ್ತಿಗಳಿಗೆ ಇನ್ನು ಮುಂದೆ ನಮ್ಮ ಜಿಲ್ಲೆಯ ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಹಾಗೂ ಉಡುಪಿ ನಗರಸಭೆಯ ನಾಮ ನಿರ್ದೇಶಕ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…