ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಿ ಆರ್ ಎಸ್ ಎಸ್ ಧ್ವಜವನ್ನು ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ ಉಡುಪಿಯ ಜಿಲ್ಲಾಧಿಕಾರಿ ಮಠದ ಆಡಳಿತಾಧಿಕಾರಿಯೇ? ಅಥವಾ ಉಡುಪಿ ನಗರಸಭೆಯ ಆಡಳಿತಾಧಿಕಾರಿಯೇ ?ಎಂಬುದನ್ನು ಅವರೇ ಸ್ಪಷ್ಟನೆ ನೀಡಬೇಕಾಗಿದೆ.
ಇದುವರೆಗಿನ ಉಡುಪಿ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ಜಿಲ್ಲಾಧಿಕಾರಿಗಳು ಆರ್ ಎಸ್ ಧ್ವಜವನ್ನು ಆರಿಸಿರಲಿಲ್ಲ. ಆದರೆ ಈ ಬಾರಿ ಉಡುಪಿಯ ಜಿಲ್ಲಾಧಿಕಾರಿಯವರು ಆರ್ಎಸ್ಎಸ್ ಧ್ವಜವನ್ನು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು. ಜಿಲ್ಲಾಧಿಕಾರಿ ತಾವು ಒಬ್ಬರು ಸರಕಾರದ ಪ್ರತಿನಿಧಿ ಎಂಬುದನ್ನು ಮರೆತಂತೆ ಇದೆ.
ನಮ್ಮ ದೇಶಕ್ಕೆ ನಮ್ಮ ರಾಷ್ಟ್ರಧ್ವಜ ಹೊರತು ಬೇರೆ ಯಾವುದೇ ಧ್ವಜಗಳು ಇರುವುದಿಲ್ಲ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರುಗಳು ಕೇವಲ ಮತಗಳಿಸಲಿಕ್ಕೋಸ್ಕರ ಈ ರೀತಿಯಾಗಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿದ್ದಾರೆ. ಮಾತ್ರವಲ್ಲದೆ ಉಡುಪಿಯ ಜಿಲ್ಲಾಧಿಕಾರಿಯವರನ್ನು ಕೂಡ ತಮ್ಮ ಹಿಂದುತ್ವದ ಬಲೆಯೊಳಗೆ ಸಿಲುಕಿರುತ್ತಾರೆ ಎಂಬುದು ಇಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ನಮ್ಮ ಬಿಜೆಪಿಯ ನಾಯಕರುಗಳಿಗೆ ಗೋಚರಿಸುತ್ತಿರುವುದು ಪಾಕಿಸ್ತಾನ ಧ್ವಜ ಮತ್ತೆ ಕಾಂಗ್ರೆಸ್ ಪಕ್ಷ. ಇದರಿಂದಾಗಿ ಇವರು ಜನರನ್ನು ಮೋಸಗೊಳಿಸಿ ತಮ್ಮ ಗೆಲುವನ್ನು ಸಾಧಿಸಲು ಹೊರಟಿರುತ್ತಾರೆ. ಇಂತಹ ದುಷ್ಟಶಕ್ತಿಗಳಿಗೆ ಇನ್ನು ಮುಂದೆ ನಮ್ಮ ಜಿಲ್ಲೆಯ ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಹಾಗೂ ಉಡುಪಿ ನಗರಸಭೆಯ ನಾಮ ನಿರ್ದೇಶಕ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…