ಉಡುಪಿಯ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸಿ ಆರ್ ಎಸ್ ಎಸ್ ಧ್ವಜವನ್ನು ಹಿಡಿದು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ ಉಡುಪಿಯ ಜಿಲ್ಲಾಧಿಕಾರಿ ಮಠದ ಆಡಳಿತಾಧಿಕಾರಿಯೇ? ಅಥವಾ ಉಡುಪಿ ನಗರಸಭೆಯ ಆಡಳಿತಾಧಿಕಾರಿಯೇ ?ಎಂಬುದನ್ನು ಅವರೇ ಸ್ಪಷ್ಟನೆ ನೀಡಬೇಕಾಗಿದೆ.
ಇದುವರೆಗಿನ ಉಡುಪಿ ಪರ್ಯಾಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ಜಿಲ್ಲಾಧಿಕಾರಿಗಳು ಆರ್ ಎಸ್ ಧ್ವಜವನ್ನು ಆರಿಸಿರಲಿಲ್ಲ. ಆದರೆ ಈ ಬಾರಿ ಉಡುಪಿಯ ಜಿಲ್ಲಾಧಿಕಾರಿಯವರು ಆರ್ಎಸ್ಎಸ್ ಧ್ವಜವನ್ನು ಪರ್ಯಾಯ ಉತ್ಸವಕ್ಕೆ ಚಾಲನೆ ನೀಡಿದ್ದು ಸಂವಿಧಾನಿಕ ತಪ್ಪು. ಜಿಲ್ಲಾಧಿಕಾರಿ ತಾವು ಒಬ್ಬರು ಸರಕಾರದ ಪ್ರತಿನಿಧಿ ಎಂಬುದನ್ನು ಮರೆತಂತೆ ಇದೆ.
ನಮ್ಮ ದೇಶಕ್ಕೆ ನಮ್ಮ ರಾಷ್ಟ್ರಧ್ವಜ ಹೊರತು ಬೇರೆ ಯಾವುದೇ ಧ್ವಜಗಳು ಇರುವುದಿಲ್ಲ. ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರುಗಳು ಕೇವಲ ಮತಗಳಿಸಲಿಕ್ಕೋಸ್ಕರ ಈ ರೀತಿಯಾಗಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿದ್ದಾರೆ. ಮಾತ್ರವಲ್ಲದೆ ಉಡುಪಿಯ ಜಿಲ್ಲಾಧಿಕಾರಿಯವರನ್ನು ಕೂಡ ತಮ್ಮ ಹಿಂದುತ್ವದ ಬಲೆಯೊಳಗೆ ಸಿಲುಕಿರುತ್ತಾರೆ ಎಂಬುದು ಇಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತಿದೆ. ನಮ್ಮ ಬಿಜೆಪಿಯ ನಾಯಕರುಗಳಿಗೆ ಗೋಚರಿಸುತ್ತಿರುವುದು ಪಾಕಿಸ್ತಾನ ಧ್ವಜ ಮತ್ತೆ ಕಾಂಗ್ರೆಸ್ ಪಕ್ಷ. ಇದರಿಂದಾಗಿ ಇವರು ಜನರನ್ನು ಮೋಸಗೊಳಿಸಿ ತಮ್ಮ ಗೆಲುವನ್ನು ಸಾಧಿಸಲು ಹೊರಟಿರುತ್ತಾರೆ. ಇಂತಹ ದುಷ್ಟಶಕ್ತಿಗಳಿಗೆ ಇನ್ನು ಮುಂದೆ ನಮ್ಮ ಜಿಲ್ಲೆಯ ಪ್ರಜ್ಞಾವಂತ ಮತದಾರರು ಎಚ್ಚೆತ್ತುಕೊಳ್ಳಬೇಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಹಾಗೂ ಉಡುಪಿ ನಗರಸಭೆಯ ನಾಮ ನಿರ್ದೇಶಕ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…