Featured

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ – Vishwanews24

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ..

ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಶಾಸಕ ಯಶ್‌ಪಾಲ್‌ ಸುವರ್ಣ ಭರವಸೆ ..

ಉಡುಪಿ: ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಡಯಾಲಿಸಿಸ್‌ ರೋಗಿಗಳು ಸೋಮವಾರ ದಿಢೀರ್‌ ಪ್ರತಿಭಟನೆ ನಡೆಸಿದರು.

ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್‌ ಸಂಜೀವಿನಿ ಸಂಸ್ಥೆಯ ನಿರ್ವ ಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆಯವರು ಕೇಂದ್ರವನ್ನು ಬಿಟ್ಟು ಕೊಡುವಾಗ ಒಟ್ಟು 14 ಡಯಾಲಿಸಿಸ್‌ ಯಂತ್ರಗಳಿದ್ದವು. ಅವುಗಳ ಪೈಕಿ ಪ್ರಸ್ತುತ ಏಳು ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದವು ಹಾಳಾಗಿದ್ದು, ಅದನ್ನು ದುರಸ್ತಿ ಕೂಡ ಮಾಡಿಲ್ಲ. ಕೇಂದ್ರದ ಅವ್ಯವಸ್ಥೆಯಿಂದ ಕಳೆದ ಒಂದು ವರ್ಷದಲ್ಲಿ 30 ರೋಗಿಗಳು ಮೃತಪಟ್ಟಿದ್ದಾರೆ ಎಂದು ಧರಣಿ ನಿರತರು ಆರೋಪಿಸಿದರು.

ಕೇಂದ್ರದಲ್ಲಿ ಒಟ್ಟು 60 ರೋಗಿಗಳು ಡಯಾಲಿಸಿಸ್‌ ಮಾಡುತ್ತಿದ್ದಾರೆ. ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೋಗಿಗಳು ಜಿಲ್ಲಾ ಸರ್ಜನ್‌, ಜಿಲ್ಲಾಧಿಕಾರಿ, ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಯಾಲಿಸಿಸ್‌ಗೆ ಸಂಬಂಧಿಸಿ ತುಂಬಾ ಸಮಸ್ಯೆ ಇದೆ. ಸರಿಯಾಗಿ ಕ್ಲೀನ್‌ ಆಗುತ್ತಿಲ್ಲ. ಸಿಬಂದಿಗಳಿಲ್ಲದೆ ಸಮಯಕ್ಕೆ ಸರಿಯಾಗಿ ಡಯಾಲಿಸಿಸ್‌ ಆಗುತ್ತಿಲ್ಲ. ಅವರು ಏನು ಮಾಡಿದರೂ ನಾವು ಕೇಳಬೇಕು. ಆದುದರಿಂದ ಸರಕಾರ ಕೂಡಲೇ ಹೊಸ ಯಂತ್ರ ಅಳವಡಿಸಿ ಸರಿಯಾದ ವ್ಯವಸ್ಥೆ ಮಾಡಿಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.

ಶಾಸಕರಿಂದ ಪರಿಶೀಲನೆ
ಧರಣಿಯ ಹಿನ್ನೆಲೆಯಲ್ಲಿ ಶಾಸಕ ಯಶ್‌ಪಾಲ್‌ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್‌ ಕೇಂದ್ರ ವನ್ನು ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾ ಸರ್ಜನ್‌ ಡಾ| ಸುದೇಶ್‌ ಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದರು. ಧರಣಿ ನಿರತ ರೋಗಿಗಳನ್ನು ಸಂತೈಸಿದ ಅವರು, ಇಲ್ಲಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಸರಕಾರ ಸಂಜೀವಿನಿ ಎಂಬ ಸಂಸ್ಥೆಗೆ ರಾಜ್ಯದ 120 ಸರಕಾರಿ ಆಸ್ಪತ್ರೆಗಳ ಡಯಾಲಿಸಿಸ್‌ ಕೇಂದ್ರವನ್ನು ಗುತ್ತಿಗೆಗೆ ವಹಿಸಿಕೊಟ್ಟಿದೆ. ಆದರೆ ಅವರ ಕೆಲವೊಂದು ಸಮಸ್ಯೆಯಿಂದಾಗಿ ಉಡುಪಿಯ ಬಡ ರೋಗಿಗಳು ತೊಂದರೆ ಅನು ಭವಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜತೆ ಕೂಡ ಮಾತನಾಡಿದ್ದು, ಸಂಜೀವಿನಿ ಸಂಸ್ಥೆಯವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದೇನೆ. ಅಲ್ಲದೆ ಸಂಸ್ಥೆಯ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರಕಾರವನ್ನು ಒತ್ತಾಯಿಸುತ್ತೇನೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago