Featured

ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ : ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ -Vishwanews24

ಜಿಲ್ಲೆಯಲ್ಲಿ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ : ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ -Vishwanews24

ಉಡುಪಿ: “ಜಿಲ್ಲೆಯಲ್ಲಿ ರೋಗ ಲಕ್ಷಣದ ಕೊರೊನಾ ವೈರಸ್ ಪ್ರಕರಣಗಳು ಶೇ. 9 ರಷ್ಟಿದೆ. ಆಸ್ಪತ್ರೆಯಲ್ಲಿ ಸುಮಾರು 43 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 176 ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. 219 ಸಕ್ರಿಯ ಪ್ರಕರಣಗಳಾಗಿವೆ. ಮೂರು ಜನರನ್ನು ಐಸಿಯುನಲ್ಲಿ ಇರಿಸಲಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 87 ಐಸಿಯು ಬೆಡ್‌ಗಳು ಖಾಲಿ ಇವೆ. ಹಾಗೆಯೇ ಕಳೆದ 20 ದಿನಗಳಲ್ಲಿ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ” ಎಂದು ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೆಚ್ಚಿನ ರೋಗಿಗಳು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ರೋಗಲಕ್ಷಣವುಳ್ಳ ಪ್ರಕರಣಗಳಿಗಿಂತ ರೋಗಲಕ್ಷಣವಿಲ್ಲದ ಪ್ರಕರಣಗಳು ಅಧಿಕವಾಗಿದೆ. ಪಾಸಿಟಿವ್‌ ಪ್ರಕರಣಗಳು ಕಡಿಮೆಯಾಗುತ್ತಿದೆ. ರಾಷ್ಟ್ರೀಯ ಅಂಕಿಅಂಶಗಳನ್ನು ಹೋಲಿಸಿದಾಗ, ಕರ್ನಾಟಕವು ಮಹಾರಾಷ್ಟ್ರದ ನಂತರ ಅಂದರೆ ಎರಡನೇ ಸ್ಥಾನದಲ್ಲಿದೆ. ನಿನ್ನೆಯವರೆಗೆ ಕರ್ನಾಟಕದಲ್ಲಿ 8.83 ಲಕ್ಷ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು ಚೇತರಿಕೆ ಪ್ರಮಾಣವು ಶೇ. 96 ರಷ್ಟಿದೆ. ದೇಶದಲ್ಲಿ ಸಾವಿನ ಪ್ರಮಾಣವು ಶೇಕಡಾ 1.6 ಕ್ಕೆ ಇಳಿದಿದೆ. ಪ್ರತಿ ಮಿಲಿಯನ್‌ಗೆ 1.67 ಲಕ್ಷ ಪರೀಕ್ಷೆ ನಡೆಸಲಾಗಿದೆ” ಎಂದು ಹೇಳಿದರು.

“ರವಿವಾರದವರೆಗೆ 22,675 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕೊರೊನಾವೈರಸ್ ಅಂಕಿಅಂಶಗಳಿಗೆ ಹೋಲಿಸಿದರೆ ಒಟ್ಟು ಚೇತರಿಕೆ ಪ್ರಮಾಣ 98.3% ರಷ್ಟಿದೆ. ಕೊರೊನಾ ಸಾವಿನ ಪ್ರಮಾಣ 0.8% ವಿದೆ. ಪ್ರತಿದಿನ ಸರಾಸರಿ 2,500 ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ. ಕಳೆದ ಎರಡು ತಿಂಗಳಿನಿಂದ, ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿವೆ. ಒಟ್ಟು ಸಕಾರಾತ್ಮಕ ಪ್ರಕರಣಗಳು ಆಗಸ್ಟ್‌ನಲ್ಲಿ 400 ಆಗಿದ್ದವು. ಬಳಿಕ ದಿನಕ್ಕೆ 200 ಕೊರೊನಾ ಪ್ರಕರಣಕ್ಕೆ ಇಳಿದಿದೆ. ಕಳೆದ ಎರಡು ತಿಂಗಳುಗಳಿಂದ ಕೊರೊನಾ ಪಾಸಿಟಿವ್ ದರವು ಶೇ. 25-30ರಷ್ಟಿದೆ. ಆದರೆ ನವೆಂಬರ್‌ನಲ್ಲಿ ಪಾಸಿಟಿವ್‌ ಪ್ರಕರಣಗಳ ಪ್ರಮಾಣವು ಶೇ. 1 ಕ್ಕೆ ಇಳಿದಿದೆ. ನವೆಂಬರ್‌ನಲ್ಲಿ ಸರಾಸರಿ 20 ಕೊರೊನಾ ಪ್ರಕರಣಗಳು ದೃಢಪಡುತ್ತಿದೆ” ಎಂದು ಹೇಳಿದರು.

“ಆರಂಭದಲ್ಲಿ, ಇತರ ಸ್ಥಳಗಳಿಂದ ವಲಸೆ ಬಂದ ಜನರಲ್ಲಿ ಕೊರೊನಾ ಪಾಸಿಟಿವ್‌ ವರದಿಯಾಗಿವೆ. ಜುಲೈ ನಂತರ ಸ್ಥಳೀಯ ಜನರಲ್ಲಿ ಕೊರೊನಾ ದೃಢಪಟ್ಟಿದೆ. ಗರಿಷ್ಠ ಹಂತಕ್ಕೆ ತಲುಪಿದ ಬಳಿಕ ವೈರಸ್ ಹರಡುವ ಪ್ರಮಾಣವು ನಿಯಂತ್ರಣಕ್ಕೆ ಬಂದಿದೆ” ಎಂದರು.

ಇನ್ನು ”ನವೆಂಬರ್ 7 ರಂದು ಕೊರೊನಾ ರೋಗಿಯೋರ್ವರು ಸಾವನ್ನಪ್ಪಿದ್ದು ಇದು ಕೊನೆಯ ಕೊರೊನಾ ಸಾವಿನ ಪ್ರಕರಣವಾಗಿದೆ. ಬಳಿಕ 20 ದಿನಗಳಿಂದ ಯಾವುದೇ ಕೊರೊನಾ ಸಾವು ಸಂಭವಿಸಿಲ್ಲ”  ಎಂದು ತಿಳಿಸಿದರು.

 

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

14 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

35 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

52 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

60 minutes ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago