Featured

ಜಿಲ್ಲೆಯಲ್ಲಿ ತಂಗುವ ವಿದೇಶಿಗರ ಮಾಹಿತಿ 24 ಗಂಟೆಯೊಳಗೆ ನೀಡುವುದು ಕಡ್ಡಾಯ  : ಉಡುಪಿ ಜಿಲ್ಲಾ ಪೊಲೀಸ್ – Vishwanews24

ಜಿಲ್ಲೆಯಲ್ಲಿ ತಂಗುವ ವಿದೇಶಿಗರ ಮಾಹಿತಿ 24 ಗಂಟೆಯೊಳಗೆ ನೀಡುವುದು ಕಡ್ಡಾಯ  : ಉಡುಪಿ ಜಿಲ್ಲಾ ಪೊಲೀಸ್

ಉಡುಪಿ: ವಿದೇಶೀಯರ ಕಾಯ್ದೆ 1911ರ ಕಲಂ, 7 ರಂತೆ ಯಾವುದೇ ವಿದೇಶಿಯರು ತಂಗುವ ಸ್ಥಳಗಳಾದ ಹೊಟೇಲ್‌ ಗೆಸ್ಟ್ ಹೌಸ್ ಧರ್ಮಶಾಲಾ/ಪತ್ಯೇಕ ಮನೆ/ಯುನಿವರ್ಸಿಟಿ ವಿದ್ಯಾ ಸಂಸ್ಥೆ/ಇತರೆ ಸ್ಥಳಗಳಲ್ಲಿ ವಿದೇಶಿಯರು ತಂಗಿದ ಬಗ್ಗೆ ಮಾಹಿತಿಯನ್ನು ಫಾರ್ಮ್ “ಸಿ” ಯನ್ನು ಸಂಬಂಧಪಟ್ಟ ಮಾಲೀಕರು ನೋಂದಣಿ ಅಧಿಕಾರಿಗಳಿಗೆ ಸಂಬಂಧಪಟ್ಟ ಜಿಲ್ಲೆಯ ಪೊಲೀಸ್ ಆಧೀಕ್ಷಕರು) 24 ಗಂಟೆಯೊಳಗೆ ನೀಡುವುದು ಕಡ್ಡಾಯವಾಗಿರುತ್ತದೆ.

1) ಸದ್ರಿ ನಿಬಂದನೆಯ ಉಲ್ಲಂಘನೆಯಾದಲ್ಲಿ ಸಂಬಂದಪಟ್ಟವರ ವಿರುದ್ಧ ಕಲಂ 14 ವಿದೇಶಿಯರ ಕಾಯ್ದೆ 1946 ರಂತೆ ಕ್ರಮ ಜರುಗಿಸಬಹುದಾಗಿದೆ. ಸದ್ರಿ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆ ಮತ್ತು ದಂಡಕ್ಕೆ ಅರ್ಹರಾಗಿರುತ್ತಾರೆ.

2) https://indianfrro.gov.in/frrg/Form ಲಿಂಕ್ ಮೂಲಕ ನೊಂದಣಿ ಮಾಡಬಹುದಾಗಿದೆ.

3) ಫಾರ್ಮ ” ಅನ್ನೋ ನಲ್ಲಿ ಭರ್ತಿಗೊಳಿಸುವುದು ಖಡ್ಡಾಯವಾಗಿ ಹೋಟೆಲ್ ಗೆಸ್ಟ್ ಹೌಸ್ ಧರ್ಮಶಾಲಾ ಪ್ರತ್ಯೇಕ ಮನೆ/ ಯುನಿವರ್ಸಿಟಿ ವಿದ್ಯಾ ಸಂಸ್ಥೆ ಇತರ ಸ್ಥಳಗಳ ಮಾಲಿಕರ ಜವಾಬ್ದಾರಿಯಾಗಿರುತ್ತದೆ, ವಿದೇಶಿಯರಿಗೆ ಫಾರ್ಮ್ ‘ಸಿ’ ಭರ್ತಿ ಗೊಳಿಸುವ ಅವಕಾಶವಿರುವುದಿಲ್ಲ.

4) ಪ್ರತ್ಯೇಕ ಮನೆಯ ಮಾಲೀಕರಿಗೆ ಓ.ಟಿ.ಪಿ ಮೂಲಕ ಸ್ವಯಂ ನೋಂದಣಿಗೆ ಅವಕಾಶವಿರುತ್ತದೆ. ಆನೈನ್ ನಲ್ಲಿ ಭರ್ತಿಗೊಳಿಸುವ ಸಂಭಂಧ ತಾಂತ್ರಿಕ ಕಾರಣಗಳಿಗೆ ಮೊಜಿಲ್ಲಾ ಪೈರ್ಫಾಕ್ಸ್ ಉಪಯೋಗಿಸುವುದು.

ಇತ್ತೀಚಿನ ದಿನಗಳಲ್ಲಿ ವಿದೇಶದಲ್ಲಿ ಕಲಸ ಕೊಡಿಸುವುದಾಗಿ ನಂಬಿಸಿ, ಮುಂಗಡವಾಗಿ ಹಣ ಪಡೆದು ವಿದೇಶಕ್ಕೆ ತೆರಳಿದ ನಂತರ ಸರಿಯಾದ ಕೆಲಸವಿಲ್ಲದೆ, ಹಣ ಹಾಗೂ ಕೆಲಸವನ್ನು ಕಳೆದುಕೊಂಡು ವಂಚನೆಗೊಳಗಾದ ಉದಾಹರಣೆಗಳು ಕಂಡುಬಂದಿರುತ್ತದೆ. ಆದುದರಿಂದ ನಾಗರೀಕರು ಜಾಗರುಕತೆಯಿಂದ ಅನಧಿಕೃತ ಎಜೆಂಟರನ್ನು ಸಂಪರ್ಕಿಸದೆ ಮಿನಿಸ್ಟ್ರೀ ಆಫ್ ಎಕ್ಸ್ಟರ್ ನಲ್ ಎಫೇರ್ಸ್ ನೊಂದಿಗೆ ನೋಂದಾಯಿತ ಎಜೆಂಟರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ಮುಂದಿನ ಕ್ರಮ ಜಿಲ್ಲೆಯಲ್ಲಿ ಅಧಿಕೃತವಾಗಿ ನೊಂದಾಯಿತರ ಮಾಹಿತಿಯನ್ನು https://www.emigrants.gov.in ನಿಂದ ಪಡೆದುಕೊಳ್ಳಬಹುದಾಗಿದೆ

ಹೊಸ ಅಥವಾ ನವೀಕೃತ ಪಾಸ್ ಪೋರ್ಟ್ ಅರ್ಜಿ ಸಲ್ಲಿಸುವ ಬಗ್ಗೆ ಸ್ಥಳೀಯ ಅಧೀಕೃತ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು (ಬೃಹ್ಮಾವರ ಮಂಗಳೂರು) ಸಂಪರ್ಕಿಸಿ ಸರಿಯಾದ ಮಾಹಿತಿಯನ್ನು ಪಡೆಯಬಹುದಾಗಿದೆ. ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಯ ಪ್ರಕಟಣೆಯಂತ ಯಾವುದೇ ಅಧಿಕೃತ ನೋಂದಾಯಿತ ಎಜೆಂಟ್ ಗಳು ಇರುವುದಿಲ್ಲ. ಹೆಚ್ಚಿನ ಮಾಹಿತಿಯನ್ನು https://www.passportindia.gov.in ನಲ್ಲಿ ಪಡೆದುಕೊಳ್ಳುಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ಪಾಸ್ ಪೋರ್ಟ್ ಪಡೆದ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇನ್ನು ಮುಂದೆ ನಕಲಿ ಪಾಸ್ ಪೋರ್ಟ್ ಪಡೆಯಲು ಸಹಕರಿಸುವ ಎಜೆಂಟ್ ಹಾಗೂ ಅರ್ಜಿದಾರರು ಪತ್ತೆಯಾದಲ್ಲಿ ಅವರ ವಿರುದ್ದ ಕಾನೂನು ಕ್ರಮ ಜರಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago