ಉಡುಪಿ : ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಪ್ರವಾಹ ಸಂಭವಿಸುವ ಸಾಧ್ಯತೆಯಿದ್ದು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ಸನ್ನದ್ಧರಾಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಎಣ್ಣೆ ಹೊಳೆಯ ಸ್ವರ್ಣ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿ ತೀವ್ರ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದಯ ಕೇಂದ್ರ ಜಲ ಆಯೋಗ ಪ್ರವಾಹ ಮುನ್ಸೂಚನೆ ಮಾನಿಟರಿಂಗ್ ನಿರ್ದೇಶನಾಲಯದ ಪ್ರವಾಹ ನಿಯಂತ್ರಣ ಕೊಠಡಿಯಿಂದ ಮುನ್ಸೂಚನೆ ಬಂದಿರುತ್ತದೆ. ಆದ್ದರಿಂದ ಸ್ವರ್ಣ ನದಿಯ ಬಳಿಯ ಗ್ರಾಮಗಳಲ್ಲಿ ಎಚ್ಚರ ವಹಿಸಿ, ಮುಂಜಾಗೃತಾ ಕ್ರಮ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ತಮ್ಮ ಮೊಬೈಲ್ ಹಾಗೂ ಕಛೇರಿ ದೂರವಾಣಿ ಸಂಖ್ಯೆಯನ್ನು ಸದಾ ಸನ್ನದ್ಧರಾಗಿರಿಸಿಕೊಂಡು ಕೂಡಲೇ ಸ್ಪಂಧಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…