ಮಂಗಳೂರು : ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸಾಧಿಸಿರುವ ವಿಜಯವನ್ನು ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ `ಹಿಂದೂ ಹುತಾತ್ಮ’ರಿಗೆ ಸಮರ್ಪಿಸಿದ್ದಾರೆ.
ಸುದ್ದಿಗಾರರೊಡನೆ ಮಾತನಾಡಿದ ನಳಿನ್, ಪಕ್ಷದ ಸಂಘಟಿತ ಹೋರಾಟದಿಂದ ವಿಜಯ ದಕ್ಕಿದೆ ಎಂದರಲ್ಲದೆ “ಕಳೆದೊಂದು ವರ್ಷದ ಅವಧಿಯಲ್ಲಿ ಹತ್ಯೆಗೀಡಾದ ಪಕ್ಷದ ಹಾಗೂ ಸಂಘ ಪರಿವಾರದ ಕಾರ್ಯಕರ್ತರಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ದೀಪಕ್ ರಾವ್ ಅವರಿಗೆ ಈ ಗೆಲುವು ಸಮರ್ಪಿತ” ಎಂದರು. “ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ, ಕೋಮುವಾದ ಹಾಗೂ ಗೂಂಡಾ ರಾಜಕಾರಣದ ವಿರುದ್ಧ ಜನತೆ ನೀಡಿದ ತೀರ್ಪು ಇದಾಗಿದೆ. ಬಿಜೆಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಶ್ರಮಿಸುವುದು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ಸಾಗರಮಾಲ, ಭಾರತ್ ಮಾಲಾ, ವಿಶ್ವ ದರ್ಜೆಯ ರೈಲು ನಿಲ್ದಾಣ ಮುಂತಾದ ಯೋಜನೆಗಳು ನೆನೆಗುದಿಗೆ ಬಿದ್ದಿವೆ” ಎಂದು ಅವರು ದೂರಿದ್ದಾರೆ.
ಕರಾವಳಿ ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಯಾಗಿವೆ ಎನ್ನುವುದನ್ನು ಈ ಜಯ ಸಾಬೀತುಪಡಿಸಿದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜಿಲ್ಲಾ ಭೇಟಿ ಕೂಡ ಪಕ್ಷಕ್ಕೆ ಬಹಳ ಸಹಾಯಕವಾಗಿತ್ತು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಕೇಂದ್ರ ಚುನಾವಣಾ ಸಮಿತಿ ಸೂಕ್ತ ಪರಾಮರ್ಶೆಯ ನಂತರ ಆಯ್ಕೆ ಮಾಡಿತ್ತು ಎಂದೂ ಅವರು ಹೇಳಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…