ಮಂಗಳೂರು : ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸಾಧಿಸಿರುವ ವಿಜಯವನ್ನು ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ `ಹಿಂದೂ ಹುತಾತ್ಮ’ರಿಗೆ ಸಮರ್ಪಿಸಿದ್ದಾರೆ.
ಸುದ್ದಿಗಾರರೊಡನೆ ಮಾತನಾಡಿದ ನಳಿನ್, ಪಕ್ಷದ ಸಂಘಟಿತ ಹೋರಾಟದಿಂದ ವಿಜಯ ದಕ್ಕಿದೆ ಎಂದರಲ್ಲದೆ “ಕಳೆದೊಂದು ವರ್ಷದ ಅವಧಿಯಲ್ಲಿ ಹತ್ಯೆಗೀಡಾದ ಪಕ್ಷದ ಹಾಗೂ ಸಂಘ ಪರಿವಾರದ ಕಾರ್ಯಕರ್ತರಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ದೀಪಕ್ ರಾವ್ ಅವರಿಗೆ ಈ ಗೆಲುವು ಸಮರ್ಪಿತ” ಎಂದರು. “ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ, ಕೋಮುವಾದ ಹಾಗೂ ಗೂಂಡಾ ರಾಜಕಾರಣದ ವಿರುದ್ಧ ಜನತೆ ನೀಡಿದ ತೀರ್ಪು ಇದಾಗಿದೆ. ಬಿಜೆಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಶ್ರಮಿಸುವುದು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ಸಾಗರಮಾಲ, ಭಾರತ್ ಮಾಲಾ, ವಿಶ್ವ ದರ್ಜೆಯ ರೈಲು ನಿಲ್ದಾಣ ಮುಂತಾದ ಯೋಜನೆಗಳು ನೆನೆಗುದಿಗೆ ಬಿದ್ದಿವೆ” ಎಂದು ಅವರು ದೂರಿದ್ದಾರೆ.
ಕರಾವಳಿ ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಯಾಗಿವೆ ಎನ್ನುವುದನ್ನು ಈ ಜಯ ಸಾಬೀತುಪಡಿಸಿದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜಿಲ್ಲಾ ಭೇಟಿ ಕೂಡ ಪಕ್ಷಕ್ಕೆ ಬಹಳ ಸಹಾಯಕವಾಗಿತ್ತು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಕೇಂದ್ರ ಚುನಾವಣಾ ಸಮಿತಿ ಸೂಕ್ತ ಪರಾಮರ್ಶೆಯ ನಂತರ ಆಯ್ಕೆ ಮಾಡಿತ್ತು ಎಂದೂ ಅವರು ಹೇಳಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…