ಮಂಗಳೂರು : ದಕ್ಷಿಣ ಕನ್ನಡದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಸಾಧಿಸಿರುವ ವಿಜಯವನ್ನು ಜಿಲ್ಲೆಯ ಸಂಸದ ನಳೀನ್ ಕುಮಾರ್ ಕಟೀಲ್ `ಹಿಂದೂ ಹುತಾತ್ಮ’ರಿಗೆ ಸಮರ್ಪಿಸಿದ್ದಾರೆ.
ಸುದ್ದಿಗಾರರೊಡನೆ ಮಾತನಾಡಿದ ನಳಿನ್, ಪಕ್ಷದ ಸಂಘಟಿತ ಹೋರಾಟದಿಂದ ವಿಜಯ ದಕ್ಕಿದೆ ಎಂದರಲ್ಲದೆ “ಕಳೆದೊಂದು ವರ್ಷದ ಅವಧಿಯಲ್ಲಿ ಹತ್ಯೆಗೀಡಾದ ಪಕ್ಷದ ಹಾಗೂ ಸಂಘ ಪರಿವಾರದ ಕಾರ್ಯಕರ್ತರಾದ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ ಹಾಗೂ ದೀಪಕ್ ರಾವ್ ಅವರಿಗೆ ಈ ಗೆಲುವು ಸಮರ್ಪಿತ” ಎಂದರು. “ಕಾಂಗ್ರೆಸ್ ಪಕ್ಷದ ದುರಾಡಳಿತ, ಭ್ರಷ್ಟಾಚಾರ, ಕೋಮುವಾದ ಹಾಗೂ ಗೂಂಡಾ ರಾಜಕಾರಣದ ವಿರುದ್ಧ ಜನತೆ ನೀಡಿದ ತೀರ್ಪು ಇದಾಗಿದೆ. ಬಿಜೆಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಶ್ರಮಿಸುವುದು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ, ಸಾಗರಮಾಲ, ಭಾರತ್ ಮಾಲಾ, ವಿಶ್ವ ದರ್ಜೆಯ ರೈಲು ನಿಲ್ದಾಣ ಮುಂತಾದ ಯೋಜನೆಗಳು ನೆನೆಗುದಿಗೆ ಬಿದ್ದಿವೆ” ಎಂದು ಅವರು ದೂರಿದ್ದಾರೆ.
ಕರಾವಳಿ ಜಿಲ್ಲೆಗಳು ಬಿಜೆಪಿಯ ಭದ್ರಕೋಟೆಯಾಗಿವೆ ಎನ್ನುವುದನ್ನು ಈ ಜಯ ಸಾಬೀತುಪಡಿಸಿದೆ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜಿಲ್ಲಾ ಭೇಟಿ ಕೂಡ ಪಕ್ಷಕ್ಕೆ ಬಹಳ ಸಹಾಯಕವಾಗಿತ್ತು. ಪ್ರತಿಯೊಬ್ಬ ಅಭ್ಯರ್ಥಿಯನ್ನು ಕೇಂದ್ರ ಚುನಾವಣಾ ಸಮಿತಿ ಸೂಕ್ತ ಪರಾಮರ್ಶೆಯ ನಂತರ ಆಯ್ಕೆ ಮಾಡಿತ್ತು ಎಂದೂ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…