ಹಾಸನ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್ ಬಳಿ ಭೂ ಕುಸಿತ ಉಂಟಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಮಂಗಳೂರಿಗೆ ತೆರಳುವವರು ಬೇಲೂರು ಮೂಲಕ ಚಾರ್ಮಾಡಿ ಘಾಟ್ನಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು. ಮೂಡಿಗೆರೆ, ಹಾನುಬಾಳು, ಕೊಟ್ಟಗೆಹಾರದ ಮೂಲಕ ಬದಲಿ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಧರ್ಮಸ್ಥಳ, ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಬೆಳಿಗ್ಗೆ ಭೂಕುಸಿತವಾದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಸಂಚಾರ ಬಂದ್ ಮಾಡಲಾಗಿದೆ.
ಸ್ಥಳಕ್ಕೆ ಉಪವಿಭಾಗಾಧಿಕಾರಿ ಪ್ರತೀಕ್, ತಹಶೀಲ್ದಾರ್ ಜಯಕುಮಾರ್, ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…