ಉಡುಪಿ : : ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾಡಳಿತ ಮಟ್ಟದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಆಡಳಿತಾತ್ಮಕ ಸಮಸ್ಯೆ ನಿವಾರಿಸಿ ಶೀಘ್ರ ಮರಳು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ ಮತ್ತು ಬಂದರು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮೀನುಗಾರಿಕೆ ಇಲಾಖೆ ಜತೆಗೆ ಬಂದರು ಇಲಾಖೆ ಒಟ್ಟಾಗಿ ಇರಬೇಕು ಎಂಬ ಬೇಡಿಕೆ ಈಡೇರಿದೆ. ಇದರಿಂದ ಜೆಟ್ಟಿ ನಿರ್ಮಾಣ, ಮೀನುಗಾರ ಸಮಸ್ಯೆ ನಿವಾರಣೆಗೆ ಅನುಕೂಲವಾಗುತ್ತದೆ. 309 ಕಡಲ ತೀರ ಸಂರಕ್ಷಣೆಗೆ ಆದ್ಯತೆ ನೀಡಲಾಗುವುದು. ಅಸಂಘಟಿತ ವಲಯ ಕಾರ್ಮಿಕರ ಪಟ್ಟಿಯಲ್ಲಿ ಮೀನುಗಾರರನ್ನು ಸೇರಿಸಲು ಸಭೆ ನಡೆಸಲಾಗಿದೆ ಎಂದರು.
ಸುವರ್ಣ ತ್ರಿಭುಜ ಬೋಟ್ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಸಾಲ ಮರುಪಾವತಿಗೆ ವಿಮೆ ಮೊತ್ತ ಕಡಿತದ ಬಳಿಕವೂ ಸುಮಾರು 25 ಲಕ್ಷ ರೂ. ಅವಶ್ಯವಿದೆ. ಇದನ್ನು ಸರ್ಕಾರದಿಂದ ಪಾವತಿಸಲು ಸಿಎಂ ಆದೇಶ ನೀಡಿದ್ದಾರೆ. ನಾಪತ್ತೆಯಾದ ಮೀನುಗಾರರಿಗೆ ಕೇಂದ್ರ ಸರ್ಕಾರದಿಂದ ಗರಿಷ್ಠ ಮೊತ್ತದ ಪರಿಹಾರ ನೀಡಲು ಬುಧವಾರ ರಾಜ್ಯ ಸರ್ಕಾರದಿಂದ ಪತ್ರ ಕಳುಹಿಸಲಾಗಿದೆ. ಮುಂದೆ ಇಂತಹ ಘಟನೆ ಆಗದಂತೆ ಇಸ್ರೋ ನೆರವಿನಿಂದ ಸಂಪರ್ಕ ಸಾಧನ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ವಾಸುದೇವ ಭಟ್ ಪೆರಂಪಳ್ಳಿ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನಡೆಯಿತು. ಅರ್ಚಕ ನವೀನ್ ಶಿವತ್ತಾಯ, ಆಡಳಿತ ಮಂಡಳಿ ಸದಸ್ಯ ಕೃಷ್ಣಮೂರ್ತಿ ಶಿವತ್ತಾಯ, ಇಂಜಿನಿಯರ್ ರಮೇಶ್ ರಾವ್, ನಗರಸಭಾ ಸದಸ್ಯರಾದ ಮಂಜುಳಾ ನಾಯಕ್, ಮಂಜುನಾಥ ಶೆಟ್ಟಿಗಾರ್, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್, ಜಯಂತಿ ಪೂಜಾರಿ, ಗಿರೀಶ್ ಅಂಚನ್, ಗಿರಿಧರ್ ಕರಂಬಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಹೆರ್ಗ ದಿನಕರ ಶೆಟ್ಟಿ, ಹರಿಕೃಷ್ಣ ಶಿವತ್ತಾಯ, ಸತೀಶ್ ಕುಮಾರ್, ಶ್ರೀನಿವಾಸ ಬಲ್ಲಾಳ್ ಮತ್ತಿತರರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…