Featured

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ತಲಾ 10 ಲಕ್ಷ ರೂ. ಪರಿಹಾರ ಬಿಡುಗಡೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ  ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ಶೀಘ್ರವೇ ಪರಿಹಾರ ನೀಡುವಂತೆ 7 ತಹಶೀಲ್ದಾರ್‌ಗೆ ತಲಾ 10 ಲಕ್ಷ ರೂ. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಎಲ್ಲ ತಹಶೀಲ್ದಾರ್‌ಗಳು ಸಂಪರ್ಕದಲ್ಲಿದ್ದಾರೆ. ನೆರೆ, ಕಡಲ್ಕೊರೆತ ಸಹಿತ ಪ್ರಾಕೃತಿಕ ವಿಕೋಪದ ತುರ್ತು ಕಾರ್ಯಾಚರಣೆಗಾಗಿ ಅಗತ್ಯ ಸಲಕರಣೆಗಳನ್ನು ಜೋಡಿಸಿಕೊಂಡಿದ್ದೇವೆ. ಇತರೆ ಇಲಾಖಾಧಿಕಾರಿಗಳೊಂದಿಗೆ ಪರಸ್ಪರ ಸಮನ್ವಯ ಇಟ್ಟುಕೊಂಡಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.

ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಜಿಲ್ಲಾಡಳಿತದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ. ಬೈಂದೂರು ಹಾಗೂ ಕುಂದಾಪುರಗಳಲ್ಲಿ ಹೆಚ್ಚಿನ ಮಳೆ ಹಾನಿ ಸಂಭವಿಸಿದ್ದು, ವಾರದ ಹಿಂದೆ ಸಿಇಒ ಜತೆ ಸ್ವತಃ ನಾನೇ ಸ್ಥಳಕ್ಕೆ 10 ಗ್ರಾ.ಪಂ. ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಲಾಗಿದೆ. ಕಡಲ್ಕೊರೆತ ಸಂಬಂಧ ಕಾಪು ತಾಲೂಕಿನ ಉಚ್ಚಿಲ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

6 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

7 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

7 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

8 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

10 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

11 hours ago