ಉಡುಪಿ: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ಶೀಘ್ರವೇ ಪರಿಹಾರ ನೀಡುವಂತೆ 7 ತಹಶೀಲ್ದಾರ್ಗೆ ತಲಾ 10 ಲಕ್ಷ ರೂ. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಎಲ್ಲ ತಹಶೀಲ್ದಾರ್ಗಳು ಸಂಪರ್ಕದಲ್ಲಿದ್ದಾರೆ. ನೆರೆ, ಕಡಲ್ಕೊರೆತ ಸಹಿತ ಪ್ರಾಕೃತಿಕ ವಿಕೋಪದ ತುರ್ತು ಕಾರ್ಯಾಚರಣೆಗಾಗಿ ಅಗತ್ಯ ಸಲಕರಣೆಗಳನ್ನು ಜೋಡಿಸಿಕೊಂಡಿದ್ದೇವೆ. ಇತರೆ ಇಲಾಖಾಧಿಕಾರಿಗಳೊಂದಿಗೆ ಪರಸ್ಪರ ಸಮನ್ವಯ ಇಟ್ಟುಕೊಂಡಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.
ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಜಿಲ್ಲಾಡಳಿತದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ. ಬೈಂದೂರು ಹಾಗೂ ಕುಂದಾಪುರಗಳಲ್ಲಿ ಹೆಚ್ಚಿನ ಮಳೆ ಹಾನಿ ಸಂಭವಿಸಿದ್ದು, ವಾರದ ಹಿಂದೆ ಸಿಇಒ ಜತೆ ಸ್ವತಃ ನಾನೇ ಸ್ಥಳಕ್ಕೆ 10 ಗ್ರಾ.ಪಂ. ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಲಾಗಿದೆ. ಕಡಲ್ಕೊರೆತ ಸಂಬಂಧ ಕಾಪು ತಾಲೂಕಿನ ಉಚ್ಚಿಲ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…