Featured

ಜಿಲ್ಲೆಯಲ್ಲೇ ಅತಿ ದೊಡ್ಡ ವೈಭವದ ಶೋಭಾ ಯಾತ್ರೆ  : ನವದುರ್ಗೆಯರಿಗೆ ಐತಿಹಾಸಿಕ ಗಂಗಾರತಿ ;  ಉಚ್ಚಿಲ ದಸರಾಗೆ ವೈಭವದ ತೆರೆ – Vishwanews24

ಜಿಲ್ಲೆಯಲ್ಲೇ ಅತಿ ದೊಡ್ಡ ವೈಭವದ ಶೋಭಾ ಯಾತ್ರೆ  : ನವದುರ್ಗೆಯರಿಗೆ ಐತಿಹಾಸಿಕ ಗಂಗಾರತಿ ;  ಉಚ್ಚಿಲ ದಸರಾಗೆ ವೈಭವದ ತೆರೆ

ಉಡುಪಿ: ಜಿಲ್ಲೆಯ ಮಹಾಲಕ್ಷ್ಮಿ ದೇವಸ್ಥಾನದ  ದಸರಾ ಮಹೋತ್ಸವ ಸಂಪನ್ನಗೊಂಡಿದ್ದು ವೈಭವದ ಮೆರವಣಿಗೆ ನಡೆಯಿತು. ಕಾಪು ಕಡಲ ತೀರದಲ್ಲಿ ನವದುರ್ಗೆಯರಿಗೆ ಗಂಗಾವತಿ ನಡೆಸಿ, ಸಾವಿರಾರು ಜನರ ಸಮ್ಮುಖದಲ್ಲಿ ಜಲಸ್ತಂಭನ ಮಾಡಲಾಯಿತು.

ದಕ್ಷಿಣ ಭಾರತದ ಪ್ರಸಿದ್ಧ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ  ನವರಾತ್ರಿ ಉತ್ಸವವನ್ನು ವೈಭವದಿಂದ ಆಚರಿಸಲಾಗಿತ್ತು. ನವ ದುರ್ಗೆಯರ ಮೂರ್ತಿಯನ್ನು 9 ದಿನ ಆರಾಧಿಸಿ, ಇಂದು ವಿಸರ್ಜನಾ ಮೆರವಣಿಗೆ ಮಾಡಲಾಯಿತು. ಸಮುದ್ರ ತೀರದಲ್ಲಿ ನವದುರ್ಗ ವಿಸರ್ಜನೆ ವಿಶೇಷವಾಗಿತ್ತು. ಇದಕ್ಕೂ ಮುನ್ನ ಹೆಲಿಕಾಪ್ಟರ್‌ನಲ್ಲಿ ಮೂರು ಸುತ್ತು ಪುಷ್ಪವೃಷ್ಟಿ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ನೂತನ ತಂತ್ರಜ್ಞಾನದ ಹೆಲಿಕಾಪ್ಟರ್ ನವ ದುರ್ಗೆಯರ ಸಮೀಪಕ್ಕೆ ಬಂದು ಮೂರು ಬಾರಿ ಪುಷ್ಪಾರ್ಚನೆ ಮಾಡಿದ್ದು ವಿಶೇಷವಾಗಿತ್ತು.

ಮೆರವಣಿಗೆಯ ವೈಭವದಲ್ಲಿ 80 ಕ್ಕಿಂತ ಹೆಚ್ಚು ಟ್ಯಾಬ್ಲೋಗಳು ಭಾಗಿಯಾದವು. ಗಣಪತಿ ಈಶ್ವರ ನವದುರ್ಗೆಯರು ಹನುಮಂತ ಮೂಷಿಕದ ಮೇಲೆ ಸಂಚಾರ ಹೊರಟ ವಿಘ್ನ ವಿನಾಶಕ ಕಾಳಿಂಗ ಮರ್ಧನ ಕೃಷ್ಣ, ಬಕಾಸುರ ರಥದಲ್ಲಿ ಸಂಚರಿಸುವ ಕೃಷ್ಣ ಅರ್ಜುನರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹುಲಿ ವೇಷ ಕುಣಿತ ವಿವಿಧ ಭಜನಾ ತಂಡಗಳು ಭಾಗಿಯಾದವು. ಇದನ್ನೂ ಓದಿ: ಉಡುಪಿ: ದುರ್ಗಾ ದೌಡ್‌‌ನಲ್ಲಿ ತಲವಾರು ಪ್ರದರ್ಶನ.. ದೂರು ದಾಖಲಿಸುವಂತೆ ವಿವಿಧ ಸಂಘಟನೆಗಳಿಂದ ಎಸ್ಪಿಗೆ ಮನವಿ – Vishwanews24

ಕಳೆದ ಹತ್ತು ದಿನದಲ್ಲಿ ಸುಮಾರು 5 ಲಕ್ಷ ಜನ ಭಕ್ತರು ಶ್ರೀ ಕ್ಷೇತ್ರ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇವರ ದರ್ಶನ ಮತ್ತು ಪ್ರಸಾದವನ್ನು ಸ್ವೀಕರಿಸಿದ್ದಾರೆ. ಮಹಾಲಕ್ಷ್ಮಿ ದೇವಸ್ಥಾನದಿಂದ ಹೆಜಮಾಡಿ ಟೋಲ್‍ವರೆಗೆ ಅಲ್ಲಿಂದ ಕಾಪುವಿನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿದೆ. ಸುಮಾರು 25 kmಗಳ ಬೃಹತ್ ಮೆರವಣಿಗೆಯನ್ನು ಕೈಗೊಂಡು ಜಿಲ್ಲೆಯಲ್ಲೇ ಅತಿ ದೊಡ್ಡ ವೈಭವದ ಶೋಭಾ ಯಾತ್ರೆ ಎಂಬ ಹೆಗ್ಗಳಿಕೆಗೆ ಉಚ್ಚಿಲ ದಸರಾ ಪಾತ್ರವಾಗಿದೆ.

ರಾತ್ರಿ ಎರಡು ಗಂಟೆಯವರೆಗೂ ಕಾಪು ಕಡಲತೀರದವರೆಗೆ ನವ ದುರ್ಗೆಯರ ವೈಭವದ ಮೆರವಣಿಗೆ ನಡೆಯಿತು. ಅಲ್ಲಲ್ಲಿ ನಿಂತು ಜನ ದೇವರಿಗೆ ಪ್ರಾರ್ಥನೆ, ಪೂಜೆ ಸಲ್ಲಿಸಿದರು. ಮಲ್ಪೆ ಕಡಲ ತೀರದಲ್ಲಿ ಸಾವಿರಾರು ಜನ ಭಕ್ತ ಸಮುದಾಯದ ನಡುವೆ ಸಾಲಾಗಿ ನವ ದುರ್ಗೆಯರ ಮೂರ್ತಿಯನ್ನು ಇಟ್ಟು ಗಂಗರತಿ ಸಲ್ಲಿಸಲಾಯಿತು. 9 ದೇವಿಯರನ್ನು ಏಕಕಾಲದಲ್ಲಿ ಜಲ ಸ್ತಂಭ ಮಾಡಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಮಲ್ಪೆ: ಬಲೆಗೆ ಬಿದ್ದ ಬೃಹತ್ ಗಾತ್ರದ ಕಾರ್ಗಿಲ್ ಮೀನು – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago