ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ.
ಕಂಬಳ ಎನ್ನುವುದು ಕೆಲವೊಂದು ಕುಟುಂಬಗಳ ಸ್ವಂತ ಆಚರಣೆಯೇ ಹೊರತು ಅದು ಜಿಲ್ಲಾಡಳಿತದ ಅನಿವಾರ್ಯ ಕಾರ್ಯಕ್ರಮವಲ್ಲ. ತಮ್ಮ ಸ್ವ ಪ್ರತಿಷ್ಠೆಯ ಪ್ರದರ್ಶನದ ಪ್ರತೀಕವಾದ ಕಂಬಳಕ್ಕೆ ಈಗ ಜಿಲ್ಲಾಡಳಿತದ ಶಿರೋನಾಮೆ ಕೊಟ್ಟು ಕೋಟ್ಯಂತರ ರೂಪಾಯಿ ಖರ್ಚು ಮಾಡುವ ವ್ಯವಸ್ಥಿತ ಸಂಚು ಇದು. ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರವಾಗಿದೆ.
ಇದನ್ನೂ ಓದಿ 👇:
ಕೋಣಗಳನ್ನು ಓಡಿಸಿ ಕಂಬಳ ನಡೆಸುವುದರಿಂದ ಕೋಣಗಳಿಗೆ ಆಗುವ ಪ್ರಯೋಜನವಾದರೂ ಏನು? ಕಂಬಳಕ್ಕೆ 6-30 ಎಕರೆ ಭೂಮಿ ಕಾದಿರಿಸಿದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಕೋಲ, ನೇಮೋತ್ಸವ ನಡೆಸಲು ಒಂದೊಂದು ಎಕರೆ ಸರಕಾರಿ ಭೂಮಿಯನ್ನು ಮಂಜೂರು ಮಾಡಿಸಲು ಈಗ ಗುದ್ದಲಿ ಪೂಜೆ ನಡೆಸಿದ ಜನಪ್ರತಿನಿಧಿಗಳು ಹೋರಾಟ ನಡೆಸುತ್ತಾರೆಯೇ ? ಜಿಲ್ಲಾಡಳಿತ ಈ ಕರಾವಳಿಯ ಆರಾಧ್ಯ ದೈವವಾದ ಬಬ್ಬುಸ್ವಾಮಿಯ ಎಲ್ಲಾ ದೈವಸ್ಥಾನಗಳಿಗೆ ನೇಮೋತ್ಸವ ನಡೆಸಲು ಒಂದೊಂದು ಎಕರೆ ಭೂಮಿ ಕಾದಿರಿಸುತ್ತದೆಯೇ ?
ಮುಂದೊಂದು ದಿನ ಜೂಜಾಟ ಆಡುವ ಕೋಳಿ ಅಂಕಕ್ಕೂ ನಿವೇಶನ ಕೊಡಬೇಕೆಂದು ಜನಪ್ರತಿನಿಧಿಗಳು ಬೇಡಿಕೆ ಇಟ್ಟು ಒತ್ತಾಯಿಸಿದರೆ ಅದಕ್ಕೂ ಜಿಲ್ಲಾಡಳಿತ ಮಣೆ ಹಾಕುತ್ತದೆಯೇ?
80 ಬಡಗುಬೆಟ್ಟು ಗ್ರಾಮದ ಸರ್ವೆ ನಂಬರ್ 11/1 ರಲ್ಲಿ 6-30 ಎಕರೆ ಭೂಮಿಯನ್ನು ಕಂಬಳಕ್ಕಾಗಿ ಕಾದಿರಿಸಿದ್ದು ಜನವಿರೋಧಿ ನೀತಿ. ಲಕ್ಷಾಂತರ ಬಡವರು ಉಡುಪಿ ಜಿಲ್ಲೆಯಲ್ಲಿ ಸ್ವಂತ ನಿವೇಶನವಿಲ್ಲದೇ ಕಣ್ಣೀರಿನ ಜೀವನ ನಡೆಸುತ್ತಿರುವಾಗ ಮೋಜು ಮಸ್ತಿಗಾಗಿ ಸರಕಾರಿ ಜಾಗವನ್ನು ಕಾದಿರಿಸಿರುವುದು ಅಕ್ಷಮ್ಯ ಎಂದು ಡಿಎಸ್ ಎಸ್ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಎಚ್ಚರಿಸಿದ್ದಾರೆ.
ಇದನ್ನೂ ಓದಿ 👇:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…