Featured

ಜಿಲ್ಲೆಯ ಜನಪ್ರತಿನಿಧಿಗಳು ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ : ಸುಂದರ ಮಾಸ್ಟರ್ – vishwanews24

ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರ : ಸುಂದರ ಮಾಸ್ಟರ್

ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ.

ಕಂಬಳ ಎನ್ನುವುದು ಕೆಲವೊಂದು ಕುಟುಂಬಗಳ ಸ್ವಂತ ಆಚರಣೆಯೇ ಹೊರತು ಅದು ಜಿಲ್ಲಾಡಳಿತದ ಅನಿವಾರ್ಯ ಕಾರ್ಯಕ್ರಮವಲ್ಲ. ತಮ್ಮ ಸ್ವ ಪ್ರತಿಷ್ಠೆಯ ಪ್ರದರ್ಶನದ ಪ್ರತೀಕವಾದ ಕಂಬಳಕ್ಕೆ ಈಗ ಜಿಲ್ಲಾಡಳಿತದ ಶಿರೋನಾಮೆ ಕೊಟ್ಟು ಕೋಟ್ಯಂತರ ರೂಪಾಯಿ ಖರ್ಚು ಮಾಡುವ ವ್ಯವಸ್ಥಿತ ಸಂಚು ಇದು. ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರವಾಗಿದೆ.

ಇದನ್ನೂ ಓದಿ 👇:

ಕೋಣಗಳನ್ನು ಓಡಿಸಿ ಕಂಬಳ ನಡೆಸುವುದರಿಂದ ಕೋಣಗಳಿಗೆ ಆಗುವ ಪ್ರಯೋಜನವಾದರೂ ಏನು? ಕಂಬಳಕ್ಕೆ 6-30 ಎಕರೆ ಭೂಮಿ ಕಾದಿರಿಸಿದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಕೋಲ, ನೇಮೋತ್ಸವ ನಡೆಸಲು ಒಂದೊಂದು ಎಕರೆ ಸರಕಾರಿ ಭೂಮಿಯನ್ನು ಮಂಜೂರು ಮಾಡಿಸಲು ಈಗ ಗುದ್ದಲಿ ಪೂಜೆ ನಡೆಸಿದ ಜನಪ್ರತಿನಿಧಿಗಳು ಹೋರಾಟ ನಡೆಸುತ್ತಾರೆಯೇ ? ಜಿಲ್ಲಾಡಳಿತ ಈ ಕರಾವಳಿಯ ಆರಾಧ್ಯ ದೈವವಾದ ಬಬ್ಬುಸ್ವಾಮಿಯ ಎಲ್ಲಾ ದೈವಸ್ಥಾನಗಳಿಗೆ ನೇಮೋತ್ಸವ ನಡೆಸಲು ಒಂದೊಂದು ಎಕರೆ ಭೂಮಿ ಕಾದಿರಿಸುತ್ತದೆಯೇ ?
ಮುಂದೊಂದು ದಿನ ಜೂಜಾಟ ಆಡುವ ಕೋಳಿ ಅಂಕಕ್ಕೂ ನಿವೇಶನ ಕೊಡಬೇಕೆಂದು ಜನಪ್ರತಿನಿಧಿಗಳು ಬೇಡಿಕೆ ಇಟ್ಟು ಒತ್ತಾಯಿಸಿದರೆ ಅದಕ್ಕೂ ಜಿಲ್ಲಾಡಳಿತ ಮಣೆ ಹಾಕುತ್ತದೆಯೇ?

80 ಬಡಗುಬೆಟ್ಟು ಗ್ರಾಮದ ಸರ್ವೆ ನಂಬರ್ 11/1 ರಲ್ಲಿ 6-30 ಎಕರೆ ಭೂಮಿಯನ್ನು ಕಂಬಳಕ್ಕಾಗಿ ಕಾದಿರಿಸಿದ್ದು ಜನವಿರೋಧಿ ನೀತಿ. ಲಕ್ಷಾಂತರ ಬಡವರು ಉಡುಪಿ ಜಿಲ್ಲೆಯಲ್ಲಿ ಸ್ವಂತ ನಿವೇಶನವಿಲ್ಲದೇ ಕಣ್ಣೀರಿನ ಜೀವನ ನಡೆಸುತ್ತಿರುವಾಗ ಮೋಜು ಮಸ್ತಿಗಾಗಿ ಸರಕಾರಿ ಜಾಗವನ್ನು ಕಾದಿರಿಸಿರುವುದು ಅಕ್ಷಮ್ಯ ಎಂದು ಡಿಎಸ್ ಎಸ್ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ 👇:

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago