Featured

ಜಿಲ್ಲೆಯ ಜನಪ್ರತಿನಿಧಿಗಳು ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ : ಸುಂದರ ಮಾಸ್ಟರ್ – vishwanews24

ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರ : ಸುಂದರ ಮಾಸ್ಟರ್

ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ.

ಕಂಬಳ ಎನ್ನುವುದು ಕೆಲವೊಂದು ಕುಟುಂಬಗಳ ಸ್ವಂತ ಆಚರಣೆಯೇ ಹೊರತು ಅದು ಜಿಲ್ಲಾಡಳಿತದ ಅನಿವಾರ್ಯ ಕಾರ್ಯಕ್ರಮವಲ್ಲ. ತಮ್ಮ ಸ್ವ ಪ್ರತಿಷ್ಠೆಯ ಪ್ರದರ್ಶನದ ಪ್ರತೀಕವಾದ ಕಂಬಳಕ್ಕೆ ಈಗ ಜಿಲ್ಲಾಡಳಿತದ ಶಿರೋನಾಮೆ ಕೊಟ್ಟು ಕೋಟ್ಯಂತರ ರೂಪಾಯಿ ಖರ್ಚು ಮಾಡುವ ವ್ಯವಸ್ಥಿತ ಸಂಚು ಇದು. ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರವಾಗಿದೆ.

ಇದನ್ನೂ ಓದಿ 👇:

ಕೋಣಗಳನ್ನು ಓಡಿಸಿ ಕಂಬಳ ನಡೆಸುವುದರಿಂದ ಕೋಣಗಳಿಗೆ ಆಗುವ ಪ್ರಯೋಜನವಾದರೂ ಏನು? ಕಂಬಳಕ್ಕೆ 6-30 ಎಕರೆ ಭೂಮಿ ಕಾದಿರಿಸಿದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಕೋಲ, ನೇಮೋತ್ಸವ ನಡೆಸಲು ಒಂದೊಂದು ಎಕರೆ ಸರಕಾರಿ ಭೂಮಿಯನ್ನು ಮಂಜೂರು ಮಾಡಿಸಲು ಈಗ ಗುದ್ದಲಿ ಪೂಜೆ ನಡೆಸಿದ ಜನಪ್ರತಿನಿಧಿಗಳು ಹೋರಾಟ ನಡೆಸುತ್ತಾರೆಯೇ ? ಜಿಲ್ಲಾಡಳಿತ ಈ ಕರಾವಳಿಯ ಆರಾಧ್ಯ ದೈವವಾದ ಬಬ್ಬುಸ್ವಾಮಿಯ ಎಲ್ಲಾ ದೈವಸ್ಥಾನಗಳಿಗೆ ನೇಮೋತ್ಸವ ನಡೆಸಲು ಒಂದೊಂದು ಎಕರೆ ಭೂಮಿ ಕಾದಿರಿಸುತ್ತದೆಯೇ ?
ಮುಂದೊಂದು ದಿನ ಜೂಜಾಟ ಆಡುವ ಕೋಳಿ ಅಂಕಕ್ಕೂ ನಿವೇಶನ ಕೊಡಬೇಕೆಂದು ಜನಪ್ರತಿನಿಧಿಗಳು ಬೇಡಿಕೆ ಇಟ್ಟು ಒತ್ತಾಯಿಸಿದರೆ ಅದಕ್ಕೂ ಜಿಲ್ಲಾಡಳಿತ ಮಣೆ ಹಾಕುತ್ತದೆಯೇ?

80 ಬಡಗುಬೆಟ್ಟು ಗ್ರಾಮದ ಸರ್ವೆ ನಂಬರ್ 11/1 ರಲ್ಲಿ 6-30 ಎಕರೆ ಭೂಮಿಯನ್ನು ಕಂಬಳಕ್ಕಾಗಿ ಕಾದಿರಿಸಿದ್ದು ಜನವಿರೋಧಿ ನೀತಿ. ಲಕ್ಷಾಂತರ ಬಡವರು ಉಡುಪಿ ಜಿಲ್ಲೆಯಲ್ಲಿ ಸ್ವಂತ ನಿವೇಶನವಿಲ್ಲದೇ ಕಣ್ಣೀರಿನ ಜೀವನ ನಡೆಸುತ್ತಿರುವಾಗ ಮೋಜು ಮಸ್ತಿಗಾಗಿ ಸರಕಾರಿ ಜಾಗವನ್ನು ಕಾದಿರಿಸಿರುವುದು ಅಕ್ಷಮ್ಯ ಎಂದು ಡಿಎಸ್ ಎಸ್ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ 👇:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

17 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

20 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago