Featured

ಜಿಲ್ಲೆಯ ಜನಪ್ರತಿನಿಧಿಗಳು ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ : ಸುಂದರ ಮಾಸ್ಟರ್ – vishwanews24

ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರ : ಸುಂದರ ಮಾಸ್ಟರ್

ಉಡುಪಿ: ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿದ್ದರೂ ಅದರ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು ಹಾಗೂ ವಿಷಾದದ ವಿಚಾರ.

ಕಂಬಳ ಎನ್ನುವುದು ಕೆಲವೊಂದು ಕುಟುಂಬಗಳ ಸ್ವಂತ ಆಚರಣೆಯೇ ಹೊರತು ಅದು ಜಿಲ್ಲಾಡಳಿತದ ಅನಿವಾರ್ಯ ಕಾರ್ಯಕ್ರಮವಲ್ಲ. ತಮ್ಮ ಸ್ವ ಪ್ರತಿಷ್ಠೆಯ ಪ್ರದರ್ಶನದ ಪ್ರತೀಕವಾದ ಕಂಬಳಕ್ಕೆ ಈಗ ಜಿಲ್ಲಾಡಳಿತದ ಶಿರೋನಾಮೆ ಕೊಟ್ಟು ಕೋಟ್ಯಂತರ ರೂಪಾಯಿ ಖರ್ಚು ಮಾಡುವ ವ್ಯವಸ್ಥಿತ ಸಂಚು ಇದು. ಕಂಬಳಕ್ಕೆ ಜಾಗ ಕಾಯ್ದಿರಿಸಿ ಆಮೇಲೆ ರೆಸಾರ್ಟ್ ತೆರೆಯುವ ಹುನ್ನಾರವಾಗಿದೆ.

ಇದನ್ನೂ ಓದಿ 👇:

ಕೋಣಗಳನ್ನು ಓಡಿಸಿ ಕಂಬಳ ನಡೆಸುವುದರಿಂದ ಕೋಣಗಳಿಗೆ ಆಗುವ ಪ್ರಯೋಜನವಾದರೂ ಏನು? ಕಂಬಳಕ್ಕೆ 6-30 ಎಕರೆ ಭೂಮಿ ಕಾದಿರಿಸಿದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಬಬ್ಬುಸ್ವಾಮಿ ದೈವಸ್ಥಾನಗಳಿಗೆ ಕೋಲ, ನೇಮೋತ್ಸವ ನಡೆಸಲು ಒಂದೊಂದು ಎಕರೆ ಸರಕಾರಿ ಭೂಮಿಯನ್ನು ಮಂಜೂರು ಮಾಡಿಸಲು ಈಗ ಗುದ್ದಲಿ ಪೂಜೆ ನಡೆಸಿದ ಜನಪ್ರತಿನಿಧಿಗಳು ಹೋರಾಟ ನಡೆಸುತ್ತಾರೆಯೇ ? ಜಿಲ್ಲಾಡಳಿತ ಈ ಕರಾವಳಿಯ ಆರಾಧ್ಯ ದೈವವಾದ ಬಬ್ಬುಸ್ವಾಮಿಯ ಎಲ್ಲಾ ದೈವಸ್ಥಾನಗಳಿಗೆ ನೇಮೋತ್ಸವ ನಡೆಸಲು ಒಂದೊಂದು ಎಕರೆ ಭೂಮಿ ಕಾದಿರಿಸುತ್ತದೆಯೇ ?
ಮುಂದೊಂದು ದಿನ ಜೂಜಾಟ ಆಡುವ ಕೋಳಿ ಅಂಕಕ್ಕೂ ನಿವೇಶನ ಕೊಡಬೇಕೆಂದು ಜನಪ್ರತಿನಿಧಿಗಳು ಬೇಡಿಕೆ ಇಟ್ಟು ಒತ್ತಾಯಿಸಿದರೆ ಅದಕ್ಕೂ ಜಿಲ್ಲಾಡಳಿತ ಮಣೆ ಹಾಕುತ್ತದೆಯೇ?

80 ಬಡಗುಬೆಟ್ಟು ಗ್ರಾಮದ ಸರ್ವೆ ನಂಬರ್ 11/1 ರಲ್ಲಿ 6-30 ಎಕರೆ ಭೂಮಿಯನ್ನು ಕಂಬಳಕ್ಕಾಗಿ ಕಾದಿರಿಸಿದ್ದು ಜನವಿರೋಧಿ ನೀತಿ. ಲಕ್ಷಾಂತರ ಬಡವರು ಉಡುಪಿ ಜಿಲ್ಲೆಯಲ್ಲಿ ಸ್ವಂತ ನಿವೇಶನವಿಲ್ಲದೇ ಕಣ್ಣೀರಿನ ಜೀವನ ನಡೆಸುತ್ತಿರುವಾಗ ಮೋಜು ಮಸ್ತಿಗಾಗಿ ಸರಕಾರಿ ಜಾಗವನ್ನು ಕಾದಿರಿಸಿರುವುದು ಅಕ್ಷಮ್ಯ ಎಂದು ಡಿಎಸ್ ಎಸ್ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ಟರ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ 👇:

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

32 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

44 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

59 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

1 hour ago