ಉಡುಪಿ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :vishwnews24

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :Vishwanews24

ಕಾಪು: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ
ಜುಲೈ 24, 2022 – ಆದಿತ್ಯವಾರ ,ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ಬೆಳಗ್ಗೆ ಗಂಟೆ 9.30 – ಅಪರಾಹ್ನ 4ಗಂಟೆಯವರೆಗೆ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.


ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಲಿದ್ದು ,ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಆಡಳಿತ ನಿರ್ದೆಶಕ ಪಿ‌ ರವೀಂದ್ರ ದಯಾನಂದ ಪೈ ದಿಕ್ಸೂಚಿ ಭಾಷಣ ಮಾಡಲಿದ್ದು ,ಅನಂತ ವೈದಿಕ ಕೇಂದ್ರ ಉಡುಪಿಯ ವೇದಮೂರ್ತಿ ಚಿಂಪಿ ರಾಮಚಂದ್ರ ಅನಂತ ಭಟ್ ಅಧ್ಯಕ್ಷತೆ ವಹಸಲಿದ್ದಾರೆ,ಮುಖ್ಯ ಅತಿಥಿಗಳಾಗಿ ಗಣೇಶ್ ಬೀಡಿ ಪಾಲುದಾರ ಗೋವಿಂದ ಜಗನ್ನಾಥ ಶೆಣೈ ,ಸಿಎ ಗೋಕುಲ್ ದಾಸ್ ಪೈ,ರತ್ನಾಕರ ಕಾಮತ್ ,ಪಿ ರಾಮಚಂದ್ರ ಶೆಣೈ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಗಾರ ಹಾಗೂ ಭಾರತೀಯ ಸೇನೆಯಲ್ಲಿನ ಯುವ ಜನರಿಗೆ ಲಭ್ಯವಿರುವ ಅವಕಾಶಗಳು ಹಾಗೂ ಸವಾಲುಗಳು ಇದರ ಬಗ್ಗೆ ಶೈಕ್ಷಣಿಕ ಕಾರ್ಯಗಾರ ನಡೆಯಲಿದೆ ಅದರ ಜತೆಗೆ ಲೆಫ್ಟಿನೆಂಟ್ ಕರ್ನಲ್ ಅಜಿತ್ ವಿ ಭಂಡಾರ್ ಕಾರ್ ಅವರ ಜೀವನ ಸಾಧನೆಯ ಸಾಕ್ಷ್ಯ ಚಿತ್ರ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಲಿದೆ.
ಅದರ ಜತೆಗೆ ಎಸ್ ಎಸ್ ಎಲ್ ಸಿ ,ಪಿಯುಸಿ, ಸಿಇಟಿ,ನೀಟ್ ಮಾಡಲಾದ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದ್ದು ಮತ್ತು ವಿದ್ಯಾಪೋಷಕ ನಿಧಿಯಿಂದ 500 ವಿದ್ಯಾರ್ಥಿಗಳಿಗೆ ಒಟ್ಟು 70 ಲಕ್ಷದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ, ಅಧ್ಯಕ್ಷ ಜಿ ಸತೀಶ್ ಹೆಗ್ಡೆ,ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿ ಎ ಗೋಪಾಲಕೃಷ್ಣ ಭಟ್ ,ವಿದ್ಯಾಪೋಷಕ್ ಸ್ಕಾಲರ್ ಶಿಪ್ ಫಂಡ್ ನ ಅಧ್ಯಕ್ಷ ಎಸ್ ಎಸ್ ನಾಯಕ್,ಸಂಯೋಜಕ ವಿಜಯ್ ಕುಮಾರ್ ಶೆಣೈ  ,ಕಾಪು ಹರೀಶ್ ನಾಯಕ್,   ಉಪಸ್ಥಿತರಿದ್ದರು.

 

 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

7 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

8 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

8 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

23 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

23 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

23 hours ago