ಉಡುಪಿ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :vishwnews24

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ :Vishwanews24

ಕಾಪು: ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ
– ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ
ಜುಲೈ 24, 2022 – ಆದಿತ್ಯವಾರ ,ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ಬೆಳಗ್ಗೆ ಗಂಟೆ 9.30 – ಅಪರಾಹ್ನ 4ಗಂಟೆಯವರೆಗೆ ನಡೆಯಲಿದೆ ಎಂದು ಕಾಪುವಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.


ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಲಿದ್ದು ,ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಆಡಳಿತ ನಿರ್ದೆಶಕ ಪಿ‌ ರವೀಂದ್ರ ದಯಾನಂದ ಪೈ ದಿಕ್ಸೂಚಿ ಭಾಷಣ ಮಾಡಲಿದ್ದು ,ಅನಂತ ವೈದಿಕ ಕೇಂದ್ರ ಉಡುಪಿಯ ವೇದಮೂರ್ತಿ ಚಿಂಪಿ ರಾಮಚಂದ್ರ ಅನಂತ ಭಟ್ ಅಧ್ಯಕ್ಷತೆ ವಹಸಲಿದ್ದಾರೆ,ಮುಖ್ಯ ಅತಿಥಿಗಳಾಗಿ ಗಣೇಶ್ ಬೀಡಿ ಪಾಲುದಾರ ಗೋವಿಂದ ಜಗನ್ನಾಥ ಶೆಣೈ ,ಸಿಎ ಗೋಕುಲ್ ದಾಸ್ ಪೈ,ರತ್ನಾಕರ ಕಾಮತ್ ,ಪಿ ರಾಮಚಂದ್ರ ಶೆಣೈ ಭಾಗವಹಿಸಲಿದ್ದಾರೆಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕಾರ್ಯಗಾರ ಹಾಗೂ ಭಾರತೀಯ ಸೇನೆಯಲ್ಲಿನ ಯುವ ಜನರಿಗೆ ಲಭ್ಯವಿರುವ ಅವಕಾಶಗಳು ಹಾಗೂ ಸವಾಲುಗಳು ಇದರ ಬಗ್ಗೆ ಶೈಕ್ಷಣಿಕ ಕಾರ್ಯಗಾರ ನಡೆಯಲಿದೆ ಅದರ ಜತೆಗೆ ಲೆಫ್ಟಿನೆಂಟ್ ಕರ್ನಲ್ ಅಜಿತ್ ವಿ ಭಂಡಾರ್ ಕಾರ್ ಅವರ ಜೀವನ ಸಾಧನೆಯ ಸಾಕ್ಷ್ಯ ಚಿತ್ರ ಮತ್ತು ಉಪನ್ಯಾಸ ಕಾರ್ಯಕ್ರಮ ಜರಗಲಿದೆ.
ಅದರ ಜತೆಗೆ ಎಸ್ ಎಸ್ ಎಲ್ ಸಿ ,ಪಿಯುಸಿ, ಸಿಇಟಿ,ನೀಟ್ ಮಾಡಲಾದ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಜಿಎಸ್ಬಿ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ನಡೆಯಲಿದ್ದು ಮತ್ತು ವಿದ್ಯಾಪೋಷಕ ನಿಧಿಯಿಂದ 500 ವಿದ್ಯಾರ್ಥಿಗಳಿಗೆ ಒಟ್ಟು 70 ಲಕ್ಷದ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ‌ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ, ಅಧ್ಯಕ್ಷ ಜಿ ಸತೀಶ್ ಹೆಗ್ಡೆ,ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿ ಎ ಗೋಪಾಲಕೃಷ್ಣ ಭಟ್ ,ವಿದ್ಯಾಪೋಷಕ್ ಸ್ಕಾಲರ್ ಶಿಪ್ ಫಂಡ್ ನ ಅಧ್ಯಕ್ಷ ಎಸ್ ಎಸ್ ನಾಯಕ್,ಸಂಯೋಜಕ ವಿಜಯ್ ಕುಮಾರ್ ಶೆಣೈ  ,ಕಾಪು ಹರೀಶ್ ನಾಯಕ್,   ಉಪಸ್ಥಿತರಿದ್ದರು.

 

 

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 minutes ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

46 minutes ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

1 hour ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

1 hour ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

1 hour ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

1 hour ago