Featured

ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ ; ಉಗ್ರರಿಗೆ ಎಚ್ಚರಿಕೆ ನೀಡಿದ ಭಾರತೀಯ ಸೇನೆ – Vishwanews24

ಶ್ರೀನಗರ: ‘ಕಾಶ್ಮೀರದಲ್ಲಿ ಯಾರಾದರೂ ಉಗ್ರರು ಗನ್ ಹಿಡಿದರೆ ಸೇನೆ ಅವರನ್ನು ಹತ್ಯೆ ಮಾಡುವುದು ಖಚಿತ. ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ’. ಕಾಶ್ಮೀರದಲ್ಲಿ ಉಗ್ರವಾದದ ದಾರಿ ಹಿಡಿದ ಯುವಕರಿಗೆ ಭಾರತೀಯ ಸೇನೆ  ಕೊನೆಯ ಎಚ್ಚರಿಕೆ ನೀಡಿದೆ.

ಕಳೆದ 5 ದಿನಗಳಲ್ಲಿ 45ಕ್ಕೂ ಅಧಿಕ ಯೋಧರನ್ನು ಕಳೆದುಕೊಂಡಿರುವ ಸೇನೆ, ಭಯೋತ್ಪಾದಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಕಾಶ್ಮೀರದಲ್ಲಿ ಇನ್ನು ಗನ್ ಹಿಡಿದರೆ ಹೊಡೆದು ಹಾಕುವುದು ನಿಶ್ಚಿತ. ಇದು ಸೇನೆಯ ಮನವಿ ಹಾಗೂ ಸಂದೇಶ ಎಂದು ಸೇನೆಯ ಹಿರಿಯ ಅಧಿಕಾರಿಗಳು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಶ್ಮೀರದ ತಾಯಂದಿರಲ್ಲಿ ಸೇನೆಯ ಮನವಿ ಏನೆಂದರೆ, ಭಯೋತ್ಪಾದಕ ಸಂಘಟನೆ ಸೇರಿರುವ ಮಕ್ಕಳಿಗೆ ಬುದ್ಧಿವಾದ ಹೇಳಿ, ಶರಣಾಗಲು ಮನವೊಲಿಸಿ. ತಾಯಂದಿರ ಜತೆಗೆ ಕುಟುಂಬ ಸದಸ್ಯರು ಹಾಗೂ ಸಮುದಾಯ ಕೂಡ ಉಗ್ರ ನಿಗ್ರಹ ಚಟುವಟಿಕೆಯಲ್ಲಿ ಸೇನೆಗೆ ನೆರವು ನೀಡಬೇಕಿದೆ ಎಂದು ಲೆಫ್ಟಿನಂಟ್ ಜನರಲ್ ಕೆಜಿಎಸ್ ಧಿಲ್ಲೋನ್ ಮನವಿ ಮಾಡಿದ್ದಾರೆ.

ಪುಲ್ವಾಮಾ ದಾಳಿ ನಡೆದ 100 ಗಂಟೆಯೊಳಗೆ ಕಣಿವೆಯಲ್ಲಿ ಸೇನೆಯು ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ. ಇದರಿಂದ ಕಣಿವೆ ರಾಜ್ಯದಲ್ಲಿ ಜೈಷ್-ಎ-ಮೊಹಮದ್​ಗೆ ನಾಯಕತ್ವವೇ ಇಲ್ಲದಂತಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ದೇಶದ ಯಾವುದೇ ಮೂಲೆಯಲ್ಲಿನ ಕಾಶ್ಮೀರಿಗಳ ನೆರವಿಗೆ ಸೇನೆ ಬದ್ಧವಾಗಿದ್ದು, 14411 ಸಹಾಯವಾಣಿಗೆ ಕರೆ ಮಾಡಿದರೆ ಸೇನೆ ರಕ್ಷಣೆಗೆ ನಿಲ್ಲಲಿದೆ. ಯಾವುದೇ ಕಾಶ್ಮೀರಿಗಳು ಭಯಪಡಬೇಕಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago