ಶ್ರೀನಗರ: ‘ಕಾಶ್ಮೀರದಲ್ಲಿ ಯಾರಾದರೂ ಉಗ್ರರು ಗನ್ ಹಿಡಿದರೆ ಸೇನೆ ಅವರನ್ನು ಹತ್ಯೆ ಮಾಡುವುದು ಖಚಿತ. ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ’. ಕಾಶ್ಮೀರದಲ್ಲಿ ಉಗ್ರವಾದದ ದಾರಿ ಹಿಡಿದ ಯುವಕರಿಗೆ ಭಾರತೀಯ ಸೇನೆ ಕೊನೆಯ ಎಚ್ಚರಿಕೆ ನೀಡಿದೆ.
ಕಳೆದ 5 ದಿನಗಳಲ್ಲಿ 45ಕ್ಕೂ ಅಧಿಕ ಯೋಧರನ್ನು ಕಳೆದುಕೊಂಡಿರುವ ಸೇನೆ, ಭಯೋತ್ಪಾದಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಕಾಶ್ಮೀರದಲ್ಲಿ ಇನ್ನು ಗನ್ ಹಿಡಿದರೆ ಹೊಡೆದು ಹಾಕುವುದು ನಿಶ್ಚಿತ. ಇದು ಸೇನೆಯ ಮನವಿ ಹಾಗೂ ಸಂದೇಶ ಎಂದು ಸೇನೆಯ ಹಿರಿಯ ಅಧಿಕಾರಿಗಳು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಶ್ಮೀರದ ತಾಯಂದಿರಲ್ಲಿ ಸೇನೆಯ ಮನವಿ ಏನೆಂದರೆ, ಭಯೋತ್ಪಾದಕ ಸಂಘಟನೆ ಸೇರಿರುವ ಮಕ್ಕಳಿಗೆ ಬುದ್ಧಿವಾದ ಹೇಳಿ, ಶರಣಾಗಲು ಮನವೊಲಿಸಿ. ತಾಯಂದಿರ ಜತೆಗೆ ಕುಟುಂಬ ಸದಸ್ಯರು ಹಾಗೂ ಸಮುದಾಯ ಕೂಡ ಉಗ್ರ ನಿಗ್ರಹ ಚಟುವಟಿಕೆಯಲ್ಲಿ ಸೇನೆಗೆ ನೆರವು ನೀಡಬೇಕಿದೆ ಎಂದು ಲೆಫ್ಟಿನಂಟ್ ಜನರಲ್ ಕೆಜಿಎಸ್ ಧಿಲ್ಲೋನ್ ಮನವಿ ಮಾಡಿದ್ದಾರೆ.
ಪುಲ್ವಾಮಾ ದಾಳಿ ನಡೆದ 100 ಗಂಟೆಯೊಳಗೆ ಕಣಿವೆಯಲ್ಲಿ ಸೇನೆಯು ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ. ಇದರಿಂದ ಕಣಿವೆ ರಾಜ್ಯದಲ್ಲಿ ಜೈಷ್-ಎ-ಮೊಹಮದ್ಗೆ ನಾಯಕತ್ವವೇ ಇಲ್ಲದಂತಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ದೇಶದ ಯಾವುದೇ ಮೂಲೆಯಲ್ಲಿನ ಕಾಶ್ಮೀರಿಗಳ ನೆರವಿಗೆ ಸೇನೆ ಬದ್ಧವಾಗಿದ್ದು, 14411 ಸಹಾಯವಾಣಿಗೆ ಕರೆ ಮಾಡಿದರೆ ಸೇನೆ ರಕ್ಷಣೆಗೆ ನಿಲ್ಲಲಿದೆ. ಯಾವುದೇ ಕಾಶ್ಮೀರಿಗಳು ಭಯಪಡಬೇಕಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…