ಶ್ರೀನಗರ: ‘ಕಾಶ್ಮೀರದಲ್ಲಿ ಯಾರಾದರೂ ಉಗ್ರರು ಗನ್ ಹಿಡಿದರೆ ಸೇನೆ ಅವರನ್ನು ಹತ್ಯೆ ಮಾಡುವುದು ಖಚಿತ. ಜೀವ ಉಳಿಸಿಕೊಳ್ಳಬೇಕಿದ್ದರೆ ಶರಣಾಗಿ’. ಕಾಶ್ಮೀರದಲ್ಲಿ ಉಗ್ರವಾದದ ದಾರಿ ಹಿಡಿದ ಯುವಕರಿಗೆ ಭಾರತೀಯ ಸೇನೆ ಕೊನೆಯ ಎಚ್ಚರಿಕೆ ನೀಡಿದೆ.
ಕಳೆದ 5 ದಿನಗಳಲ್ಲಿ 45ಕ್ಕೂ ಅಧಿಕ ಯೋಧರನ್ನು ಕಳೆದುಕೊಂಡಿರುವ ಸೇನೆ, ಭಯೋತ್ಪಾದಕರಿಗೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಕಾಶ್ಮೀರದಲ್ಲಿ ಇನ್ನು ಗನ್ ಹಿಡಿದರೆ ಹೊಡೆದು ಹಾಕುವುದು ನಿಶ್ಚಿತ. ಇದು ಸೇನೆಯ ಮನವಿ ಹಾಗೂ ಸಂದೇಶ ಎಂದು ಸೇನೆಯ ಹಿರಿಯ ಅಧಿಕಾರಿಗಳು ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾಶ್ಮೀರದ ತಾಯಂದಿರಲ್ಲಿ ಸೇನೆಯ ಮನವಿ ಏನೆಂದರೆ, ಭಯೋತ್ಪಾದಕ ಸಂಘಟನೆ ಸೇರಿರುವ ಮಕ್ಕಳಿಗೆ ಬುದ್ಧಿವಾದ ಹೇಳಿ, ಶರಣಾಗಲು ಮನವೊಲಿಸಿ. ತಾಯಂದಿರ ಜತೆಗೆ ಕುಟುಂಬ ಸದಸ್ಯರು ಹಾಗೂ ಸಮುದಾಯ ಕೂಡ ಉಗ್ರ ನಿಗ್ರಹ ಚಟುವಟಿಕೆಯಲ್ಲಿ ಸೇನೆಗೆ ನೆರವು ನೀಡಬೇಕಿದೆ ಎಂದು ಲೆಫ್ಟಿನಂಟ್ ಜನರಲ್ ಕೆಜಿಎಸ್ ಧಿಲ್ಲೋನ್ ಮನವಿ ಮಾಡಿದ್ದಾರೆ.
ಪುಲ್ವಾಮಾ ದಾಳಿ ನಡೆದ 100 ಗಂಟೆಯೊಳಗೆ ಕಣಿವೆಯಲ್ಲಿ ಸೇನೆಯು ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಗುಪ್ತಚರ ಸಂಸ್ಥೆಗಳ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆದಿದೆ. ಇದರಿಂದ ಕಣಿವೆ ರಾಜ್ಯದಲ್ಲಿ ಜೈಷ್-ಎ-ಮೊಹಮದ್ಗೆ ನಾಯಕತ್ವವೇ ಇಲ್ಲದಂತಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ದೇಶದ ಯಾವುದೇ ಮೂಲೆಯಲ್ಲಿನ ಕಾಶ್ಮೀರಿಗಳ ನೆರವಿಗೆ ಸೇನೆ ಬದ್ಧವಾಗಿದ್ದು, 14411 ಸಹಾಯವಾಣಿಗೆ ಕರೆ ಮಾಡಿದರೆ ಸೇನೆ ರಕ್ಷಣೆಗೆ ನಿಲ್ಲಲಿದೆ. ಯಾವುದೇ ಕಾಶ್ಮೀರಿಗಳು ಭಯಪಡಬೇಕಿಲ್ಲ ಎಂದು ಭಾರತೀಯ ಸೇನೆ ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…