ಬೆಂಗಳೂರು: ನಗರದ ಕಬ್ಬನ್ ಉದ್ಯಾನವನದಲ್ಲಿ ಸಾಕು ನಾಯಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಜುಲೈ 1ರಿಂದ ಉದ್ಯಾನದಲ್ಲಿ ಸಾಕು ನಾಯಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲು ತೋಟಗಾರಿಕೆ ಇಲಾಖೆ ತೀರ್ಮಾನಿಸಿದೆ. ಈ ಸಂಬಂಧ ತೋಟಗಾರಿಕೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಲವು ಸುತ್ತಿನ ಸಭೆ ನಡೆಸಿದ್ದು, ಮತ್ತೊಂದು ಸಭೆ ನಡೆಸಿ ಕಬ್ಬನ್ ಉದ್ಯಾನದಲ್ಲಿ ಸಾಕು ನಾಯಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲು ನಿರ್ಧರಿಸಲಾಗಿದೆ.
ಸಾಕು ನಾಯಿಗಳಿಂದ ಉದ್ಯಾನದಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಗೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತ ಪಡಿಸಿ, ಈ ಸಂಬಂಧ ಮಾರ್ಗಸೂಚಿಗಳನ್ನು ರಚಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಇಲಾಖೆ, ಸಾಕು ನಾಯಿಗಳನ್ನು ಉದ್ಯಾನ ಪ್ರವೇಶಕ್ಕೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು.
ಮಾರ್ಗಸೂಚಿಗಳ ಫಲಕಗಳನ್ನು ಎಲ್ಲ ದ್ವಾರಗಳಲ್ಲಿ ಅಳವಡಿಸಿತ್ತು. ಈ ಸಂಬಂಧ ಭದ್ರತಾ ಸಿಬ್ಬಂದಿಯಿಂದ ನಾಯಿ ಮಾಲಿಕರಿಗೆ ಸೂಚನೆ ನೀಡುತ್ತಿದ್ದರೂ, ಪ್ರಯೋಜನವಾಗಿರಲಿಲ್ಲ. ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೆ, ಶ್ವಾನಪ್ರಿಯರು ತಮ್ಮ ನಾಯಿಗಳನ್ನು ಹಿಡಿದಿಟ್ಟುಕೊಳ್ಳುವುದು, ಅವುಗಳಿಂದ ಉಂಟಾದ ತ್ಯಾಜ್ಯವನ್ನು ಸ್ವಚ್ಛಗೊಳಿಸುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದರಿಂದ ಇತರೆ ವಾಯು ವಿಹಾರಿಗಳಿಗೆ ಕಿರಿಕಿರಿಯುಂಟು ಮಾಡುತ್ತಿತ್ತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…