ಬೆಂಗಳೂರು: ‘ನಗರದ ಉತ್ತಮ ಭವಿಷ್ಯಕ್ಕೆಂದು ಕೆಂಪೇಗೌಡರು ನಿರ್ಮಿಸಿದ್ದ ಕೆರೆ, ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಆರ್.ಟಿ. ನಗರದ ಮೈದಾನದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.
ಭೂಗಳ್ಳರು ಸಾವಿರಾರು ಕೆರೆಗಳನ್ನು ಸ್ವಾರ್ಥಕ್ಕೆ ನುಂಗಿ ಬೃಹತ್ ಕಟ್ಟಡ ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ ಎಂದು ಹೇಳಿದರು.
’ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗೂ ತಲುಪಲಿದ್ದೇವೆ‘ ಎಂದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಸಯ್ಯದ್ ಮೋಹಿದ್ ಅಲ್ತಾಫ್ ಹೆಸರನ್ನು ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಹೆಬ್ಬಾಳದ ಅಧ್ಯಕ್ಷ ಎಸ್. ರುದ್ರಪ್ಪ, ಹಕೀಂ ಬಾಬು, ರಾಜಶೇಖರ್ ಹಾಜರಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…