ಬೆಂಗಳೂರು: ‘ನಗರದ ಉತ್ತಮ ಭವಿಷ್ಯಕ್ಕೆಂದು ಕೆಂಪೇಗೌಡರು ನಿರ್ಮಿಸಿದ್ದ ಕೆರೆ, ರಾಜಕಾಲುವೆಗಳನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ದೂರಿದರು.
ಆರ್.ಟಿ. ನಗರದ ಮೈದಾನದಲ್ಲಿ ಆಯೋಜಿಸಿದ್ದ ಕೆಂಪೇಗೌಡರ ಜಯಂತಿಯಲ್ಲಿ ಅವರು ಮಾತನಾಡಿದರು.
ಭೂಗಳ್ಳರು ಸಾವಿರಾರು ಕೆರೆಗಳನ್ನು ಸ್ವಾರ್ಥಕ್ಕೆ ನುಂಗಿ ಬೃಹತ್ ಕಟ್ಟಡ ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ ಎಂದು ಹೇಳಿದರು.
’ಜುಲೈ 1ರಿಂದ ನಗರದಲ್ಲಿ ಜನತಾ ಯಾತ್ರೆ ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್ ಮತ್ತು ರಸ್ತೆಗೂ ತಲುಪಲಿದ್ದೇವೆ‘ ಎಂದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಸಯ್ಯದ್ ಮೋಹಿದ್ ಅಲ್ತಾಫ್ ಹೆಸರನ್ನು ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಘೋಷಿಸಿದರು.
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ, ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಹೆಬ್ಬಾಳದ ಅಧ್ಯಕ್ಷ ಎಸ್. ರುದ್ರಪ್ಪ, ಹಕೀಂ ಬಾಬು, ರಾಜಶೇಖರ್ ಹಾಜರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…