Featured

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವಂತ ಜಿಲ್ಲೆಗಳು ಹೊರತಾಗಿ, ಉಳಿದ ಜಿಲ್ಲೆಗಳ ಶಿಕ್ಷಕರು ಜುಲೈ 1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ ) ಇವರಿಗೆ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ದಿನಾಂಕ 01-07-2021 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ಪ್ರಾರಂಭಿಸಲು ಹಾಗೂ ಮಕ್ಕಳ ಕಲಿಕೆಗೆ ಪೂರ್ವ ತಯಾರಿಯನ್ನು ಶಿಕ್ಷಕರು ದಿನಾಂಕ 15-06-2021ರಿಂದ ಪ್ರಾರಂಭಿಸಲು ಈಗಾಗಲೇ ತಿಳಿಸಲಾಗಿದೆ.

ಕೋವಿಡ್-19ರ ಹಿನ್ನಲೆಯಲ್ಲಿ ವಿಧಿಸಲಾಗಿರುವ ಕಠಿಣ ನಿರ್ಬಂಧಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ(ಶೈಕ್ಷಣಿಕ ಜಿಲ್ಲೆ) ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದುವರೆಸಲಾಗಿದ್ದು, ಸದರಿ ಜಿಲ್ಲೆಗಳ ಎಲ್ಲಾ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದ ಪೂರ್ವ ತಯಾರಿ ಕಾರ್ಯಗಳನ್ನು ಮಾಡಿಕೊಳ್ಳಲು ತಮ್ಮ ಮನೆಗಳಿಂದ ಕಾರ್ಯನಿರ್ವಹಿಸಲು ಕೋರಿದೆ. ಕಠಿಣ ನಿರ್ಬಂಧಗಳನ್ನು ಭಾಗಶಹ ತೆರವುಗೊಳಿಸಿದ ತಕ್ಷಣವೇ ಶಿಕ್ಷಕರು ಶಾಲೆಗಳಿಗೆ ತೆರಳಿ, ತೊಡಗಿಸಿಕೊಳ್ಳತಕ್ಕದ್ದು.

ಸದರಿ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿನ ಎಲ್ಲಾ ಶಾಲಾ ಶಿಕ್ಷಕರು ದಿನಾಂಕ 15-06-2021ರಿಂದ ಕಾರ್ಯಪ್ರವೃತ್ತರಾಗಲು ಕೋರಿದೆ. ಈ ಎಲ್ಲಾ ಅಂಶಗಳ ಕುರಿತು ಅನುಪಾಲನೆ ಮಾಡಲು ಎಲ್ಲಾ ಉಪ ನಿರ್ದೇಶಕರು(ಆಡಳಿತ) ಮತ್ತು (ಅಭಿವೃದ್ಧಿ)ರವರಿಗೆ ಸೂಚಿಸಿದ್ದಾರೆ.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

19 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

41 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

1 hour ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 hour ago