Featured

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಜುಲೈ.1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭ : ನಾಳೆಯಿಂದ ಕೆಲಸಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ‘ಸಾರ್ವಜನಿಕ ಶಿಕ್ಷಣ ಇಲಾಖೆ’ ಆದೇಶ -Vishwanews24

ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿರುವಂತ ಜಿಲ್ಲೆಗಳು ಹೊರತಾಗಿ, ಉಳಿದ ಜಿಲ್ಲೆಗಳ ಶಿಕ್ಷಕರು ಜುಲೈ 1ರಿಂದ ಪ್ರಾಥಮಿಕ, ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ ) ಇವರಿಗೆ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ದಿನಾಂಕ 01-07-2021 ರಿಂದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳನ್ನು ಪ್ರಾರಂಭಿಸಲು ಹಾಗೂ ಮಕ್ಕಳ ಕಲಿಕೆಗೆ ಪೂರ್ವ ತಯಾರಿಯನ್ನು ಶಿಕ್ಷಕರು ದಿನಾಂಕ 15-06-2021ರಿಂದ ಪ್ರಾರಂಭಿಸಲು ಈಗಾಗಲೇ ತಿಳಿಸಲಾಗಿದೆ.

ಕೋವಿಡ್-19ರ ಹಿನ್ನಲೆಯಲ್ಲಿ ವಿಧಿಸಲಾಗಿರುವ ಕಠಿಣ ನಿರ್ಬಂಧಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕೋಡಿ(ಶೈಕ್ಷಣಿಕ ಜಿಲ್ಲೆ) ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದುವರೆಸಲಾಗಿದ್ದು, ಸದರಿ ಜಿಲ್ಲೆಗಳ ಎಲ್ಲಾ ಶಿಕ್ಷಕರು ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದ ಪೂರ್ವ ತಯಾರಿ ಕಾರ್ಯಗಳನ್ನು ಮಾಡಿಕೊಳ್ಳಲು ತಮ್ಮ ಮನೆಗಳಿಂದ ಕಾರ್ಯನಿರ್ವಹಿಸಲು ಕೋರಿದೆ. ಕಠಿಣ ನಿರ್ಬಂಧಗಳನ್ನು ಭಾಗಶಹ ತೆರವುಗೊಳಿಸಿದ ತಕ್ಷಣವೇ ಶಿಕ್ಷಕರು ಶಾಲೆಗಳಿಗೆ ತೆರಳಿ, ತೊಡಗಿಸಿಕೊಳ್ಳತಕ್ಕದ್ದು.

ಸದರಿ ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿನ ಎಲ್ಲಾ ಶಾಲಾ ಶಿಕ್ಷಕರು ದಿನಾಂಕ 15-06-2021ರಿಂದ ಕಾರ್ಯಪ್ರವೃತ್ತರಾಗಲು ಕೋರಿದೆ. ಈ ಎಲ್ಲಾ ಅಂಶಗಳ ಕುರಿತು ಅನುಪಾಲನೆ ಮಾಡಲು ಎಲ್ಲಾ ಉಪ ನಿರ್ದೇಶಕರು(ಆಡಳಿತ) ಮತ್ತು (ಅಭಿವೃದ್ಧಿ)ರವರಿಗೆ ಸೂಚಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago