Featured

ಜುಲೈ 1 ರಿಂದ ಮಂಗಳೂರು – ದಿಲ್ಲಿ, ಕೊಯಮತ್ತೂರು, ಬೆಳಗಾವಿಗೆ ವಿಮಾನ ಸೇವೆ ಆರಂಭ – Vishwanews24

ಜುಲೈ 1 ರಿಂದ  ಮಂಗಳೂರು – ದಿಲ್ಲಿ, ಕೊಯಮತ್ತೂರು, ಬೆಳಗಾವಿಗೆ ವಿಮಾನ ಸೇವೆ ಆರಂಭ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಬೆಳಗಾವಿ ಹಾಗೂ ಕೊಯಮತ್ತೂರಿಗೆ ಮುಂದಿನ ತಿಂಗಳಿನಿಂದ ವಿಮಾನ ಸೇವೆ ಆರಂಭವಾಗಲಿದ್ದು, ಕರಾವಳಿಯ ಬಂದರು ನಗರಿಗೆ ಮತ್ತಷ್ಟು ನಗರಗಳು ಹತ್ತಿರವಾಗಲಿವೆ.

ಕಳೆದ ಎರಡು ವರ್ಷಗಳಿಂದ ಬೇಡಿಕೆಯಿದ್ದ ಮಂಗಳೂರಿನಿಂದ ಹೊಸದಿಲ್ಲಿಯನ್ನು ಸಂಪರ್ಕಿಸುವ ನೇರ ವಿಮಾನದ ಬೇಡಿಕೆ ಸಾಕಾರಗೊಂಡಿದ್ದು, ಜು. 1ರಿಂದ ಇಂಡಿಗೋ ಸಂಸ್ಥೆಯಿಂದ ತಡೆರಹಿತ ವಿಮಾನ ಸೇವೆ ಆರಂಭವಾಗಲಿದೆ. ದಿಲ್ಲಿಯಿಂದ ಬೆಳಗ್ಗೆ 7.40ಕ್ಕೆ ಟೇಕಾಫ್‌ ಆಗಲಿರುವ ವಿಮಾನ ಬೆಳಗ್ಗೆ 10.15ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ. ಬೆಳಗ್ಗೆ 10.45ಕ್ಕೆ ಮಂಗಳೂರಿನಿಂದ ನಿರ್ಗಮಿಸಲಿರುವ ವಿಮಾನ ಮಧ್ಯಾಹ್ನ 1.20ಕ್ಕೆ ದಿಲ್ಲಿಯಲ್ಲಿ ಇಳಿಯಲಿದೆ. ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಈ ವಿಮಾನ ಕಾರ್ಯಾಚರಿಸಲಿದೆ.

ತಮಿಳುನಾಡಿನ ಕೊಯಮತ್ತೂರಿಗೆ ಮಂಗಳೂರಿನಿಂದ ವಿಮಾನ ಸೇವೆ ಬೇಕೆಂಬ ಬೇಡಿಕೆಯೂ ಈಡೇರಿದೆ. ಜು. 1ರಿಂದ ಅನ್ವಯವಾಗುವಂತೆ ಗೋ ಫಸ್ಟ್‌ ವಿಮಾನ ಸಂಸ್ಥೆ ಪ್ರತಿದಿನ ವಿಮಾನ ನಿರ್ವಹಣೆ ಮಾಡಲಿದೆ. ಮಧ್ಯಾಹ್ನ 1.30ಕ್ಕೆ ಮಂಗಳೂರಿನಿಂದ ಟೇಕಾಫ್‌ ಆಗುವ ವಿಮಾನ ಮಧ್ಯಾಹ್ನ 2.20ಕ್ಕೆ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿದೆ. ಆದರೆ ಸದ್ಯ ಮುಂಬಯಿ-ಮಂಗಳೂರು ಗೋ ಫಸ್ಟ್‌ ವಿಮಾನ ಸೇವೆಯನ್ನೇ ಕೊಯಮತ್ತೂರಿಗೆ ವಿಸ್ತರಿಸಲಾಗಿದ್ದು, ಅಲ್ಲಿಂದ ಈ ವಿಮಾನ ಮತ್ತೆ ಮುಂಬಯಿಗೆ ತೆರಳಲಿದೆ. ಈ ಕಾರಣದಿಂದ ಮಂಗಳೂರು-ಕೊಯಮತ್ತೂರು ಏಕಮುಖ ಸಂಚಾರ ಮಾತ್ರ ಇರಲಿದ್ದು, ಕೊಯಮತ್ತೂರಿನಿಂದ ಮಂಗಳೂರಿಗೆ ಮರಳಿ ನೇರ ವಿಮಾನ ಸೇವೆ ಇರುವುದಿಲ್ಲ.

Vishwa News 24

Recent Posts

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ – vishwanews24

ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…

9 minutes ago

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ – vishwanews24

ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್‌ ಉಡುಪಿ : ಕಳೆದ…

26 minutes ago

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ ‘ಲೈಟ್’ ದರದಲ್ಲಿ ಸಿಗಲಿದೆ  ಭರ್ಜರಿ ಲಾಭ -vishwanews24

ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ  ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…

42 minutes ago

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ – vishwanews24

ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…

57 minutes ago

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

19 hours ago