Featured

ಜುಲೈ 1 ರಿಂದ ಮಂಗಳೂರು – ದಿಲ್ಲಿ, ಕೊಯಮತ್ತೂರು, ಬೆಳಗಾವಿಗೆ ವಿಮಾನ ಸೇವೆ ಆರಂಭ – Vishwanews24

ಜುಲೈ 1 ರಿಂದ  ಮಂಗಳೂರು – ದಿಲ್ಲಿ, ಕೊಯಮತ್ತೂರು, ಬೆಳಗಾವಿಗೆ ವಿಮಾನ ಸೇವೆ ಆರಂಭ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಷ್ಟ್ರ ರಾಜಧಾನಿ ಹೊಸದಿಲ್ಲಿ, ಬೆಳಗಾವಿ ಹಾಗೂ ಕೊಯಮತ್ತೂರಿಗೆ ಮುಂದಿನ ತಿಂಗಳಿನಿಂದ ವಿಮಾನ ಸೇವೆ ಆರಂಭವಾಗಲಿದ್ದು, ಕರಾವಳಿಯ ಬಂದರು ನಗರಿಗೆ ಮತ್ತಷ್ಟು ನಗರಗಳು ಹತ್ತಿರವಾಗಲಿವೆ.

ಕಳೆದ ಎರಡು ವರ್ಷಗಳಿಂದ ಬೇಡಿಕೆಯಿದ್ದ ಮಂಗಳೂರಿನಿಂದ ಹೊಸದಿಲ್ಲಿಯನ್ನು ಸಂಪರ್ಕಿಸುವ ನೇರ ವಿಮಾನದ ಬೇಡಿಕೆ ಸಾಕಾರಗೊಂಡಿದ್ದು, ಜು. 1ರಿಂದ ಇಂಡಿಗೋ ಸಂಸ್ಥೆಯಿಂದ ತಡೆರಹಿತ ವಿಮಾನ ಸೇವೆ ಆರಂಭವಾಗಲಿದೆ. ದಿಲ್ಲಿಯಿಂದ ಬೆಳಗ್ಗೆ 7.40ಕ್ಕೆ ಟೇಕಾಫ್‌ ಆಗಲಿರುವ ವಿಮಾನ ಬೆಳಗ್ಗೆ 10.15ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ. ಬೆಳಗ್ಗೆ 10.45ಕ್ಕೆ ಮಂಗಳೂರಿನಿಂದ ನಿರ್ಗಮಿಸಲಿರುವ ವಿಮಾನ ಮಧ್ಯಾಹ್ನ 1.20ಕ್ಕೆ ದಿಲ್ಲಿಯಲ್ಲಿ ಇಳಿಯಲಿದೆ. ಸೋಮವಾರ, ಬುಧವಾರ, ಶುಕ್ರವಾರ ಹಾಗೂ ಭಾನುವಾರ ಸೇರಿ ವಾರದಲ್ಲಿ ನಾಲ್ಕು ದಿನ ಈ ವಿಮಾನ ಕಾರ್ಯಾಚರಿಸಲಿದೆ.

ತಮಿಳುನಾಡಿನ ಕೊಯಮತ್ತೂರಿಗೆ ಮಂಗಳೂರಿನಿಂದ ವಿಮಾನ ಸೇವೆ ಬೇಕೆಂಬ ಬೇಡಿಕೆಯೂ ಈಡೇರಿದೆ. ಜು. 1ರಿಂದ ಅನ್ವಯವಾಗುವಂತೆ ಗೋ ಫಸ್ಟ್‌ ವಿಮಾನ ಸಂಸ್ಥೆ ಪ್ರತಿದಿನ ವಿಮಾನ ನಿರ್ವಹಣೆ ಮಾಡಲಿದೆ. ಮಧ್ಯಾಹ್ನ 1.30ಕ್ಕೆ ಮಂಗಳೂರಿನಿಂದ ಟೇಕಾಫ್‌ ಆಗುವ ವಿಮಾನ ಮಧ್ಯಾಹ್ನ 2.20ಕ್ಕೆ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಲಿದೆ. ಆದರೆ ಸದ್ಯ ಮುಂಬಯಿ-ಮಂಗಳೂರು ಗೋ ಫಸ್ಟ್‌ ವಿಮಾನ ಸೇವೆಯನ್ನೇ ಕೊಯಮತ್ತೂರಿಗೆ ವಿಸ್ತರಿಸಲಾಗಿದ್ದು, ಅಲ್ಲಿಂದ ಈ ವಿಮಾನ ಮತ್ತೆ ಮುಂಬಯಿಗೆ ತೆರಳಲಿದೆ. ಈ ಕಾರಣದಿಂದ ಮಂಗಳೂರು-ಕೊಯಮತ್ತೂರು ಏಕಮುಖ ಸಂಚಾರ ಮಾತ್ರ ಇರಲಿದ್ದು, ಕೊಯಮತ್ತೂರಿನಿಂದ ಮಂಗಳೂರಿಗೆ ಮರಳಿ ನೇರ ವಿಮಾನ ಸೇವೆ ಇರುವುದಿಲ್ಲ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

59 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago