Featured

ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ – vishwanews24

ಮಂಗಳೂರು: ಜುಲೈ 22ರಿಂದ ಪ್ರತಿ ದಿನ ಮಂಗಳೂರು –  ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ

ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ.

ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧಾರ ಮಾಡಿದೆ. ಈ ನಿರ್ಧಾರದ ಅನುಸಾರ ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳು ಮಾತ್ರ ಮಂಗಳೂರಿನಿಂ ದ ಅಬುಧಾಬಿಗೆ ಸಂಚರಿಸುತ್ತಿದ್ದ ವಿಮಾನಗಳು, ಜುಲೈ 22ರಿಂದ ದಿನನಿತ್ಯವೂ ಸಂಚರಿಸಲಿವೆ.

ಪ್ರಸ್ತುತ ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ 1 ವಿಮಾನ ಸೇರಿ ಒಟ್ಟು 5 ವಿಮಾನಗಳು ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದೆ. ಜುಲೈ 8 ರಿಂದ, ಈ ವಲಯದಲ್ಲಿ ದಿನನಿತ್ಯ ಒಟ್ಟು 6 ವಿಮಾನಗಳು ಸಂಚರಿಸಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್​ಪ್ರೆಸ್ ತನ್ನ ಎರಡನೇ ದೈನಂದಿನ ಸಂಚಾರವನ್ನು ಬೆಂಗಳೂರಿನಿಂದ ಮಂಗಳೂರಿಗೆ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಸದ್ಯ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವವರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಏರಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

9 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago