ಮಂಗಳೂರು/ಉಡುಪಿ, : ಜುಲೈ 27ರವರೆಗೆ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಎಚ್ಚರಿಕೆ ನೀಡಿದೆ.
ನದಿಗಳು, ನೀರಿರುವ ಪ್ರದೇಶ ಮತ್ತು ಸಮುದ್ರದಿಂದ ದೂರವಿರುವಂತೆ ಅಧಿಕಾರಿಗಳು ಸಾರ್ವಜನಿಕರು, ಪ್ರವಾಸಿಗರು ಮತ್ತು ಮೀನುಗಾರರಿಗೆ ಸೂಚಿಸಿದ್ದಾರೆ. ಸಾರ್ವಜನಿಕರು, ವಿಶೇಷವಾಗಿ ಮಕ್ಕಳು ಮತ್ತು ಕಾರ್ಮಿಕರು ಮಳೆ, ಗಾಳಿ ಅಥವಾ ಸಿಡಿಲು ಇರುವಾಗ ಹೊರಗೆ ಹೋಗಬಾರದು ಮತ್ತು ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯಬೇಕು. ಕೃಷಿಕರು ಮಳೆ ಅಥವಾ ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸಲಹೆ ನೀಡಲಾಗಿದೆ.
ಅಪಾಯಕಾರಿ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಮತ್ತು ಮುರಿದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ದುರ್ಬಲ ಅಥವಾ ಹಳೆಯ ಕಟ್ಟಡಗಳು ಮತ್ತು ಮರಗಳಿಂದ ದೂರವಿರಬೇಕು. ಕಟ್ಟಡಗಳ ಮೇಲಿರುವ ಅಪಾಯಕಾರಿ ಕೊಂಬೆಗಳು ಇದ್ದಲ್ಲಿ ಅದನ್ನು ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ರಕ್ಷಿಸಿಕೊಳ್ಳಬೇಕು.
ಕೆಲವು ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದ್ದು, ಅಂತಹ ಪ್ರದೇಶಗಳ ನಿವಾಸಿಗಳು ಸ್ಥಳೀಯ ತಹಶೀಲ್ದಾರ್ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಿ ಹತ್ತಿರದ ಪರಿಹಾರ ಕೇಂದ್ರಗಳಲ್ಲಿ ಮುಂಚಿತವಾಗಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…